‘ಅರಣ್ಯ ಮತ್ತು ವಿಹಾರಧಾಮಗಳಲ್ಲಿ ಚಾರಣ ಮತ್ತು ಸಫಾರಿಗೂ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ನೈರ್ಮಲ್ಯ, ಅಂತರ ಕಾಪಾಡಿಕೊಂಡು ಕೇಂದ್ರ ಸರ್ಕಾರದ ನಿರ್ದೇಶನಗಳಿಗೆ ಬದ್ಧರಾಗುವ ಷರತ್ತಿನೊಂದಿಗೆ ಪುನರ್ ಆರಂಭಿಸಬಹುದು’ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಕೆ. ಅನಿಲ್ಕುಮಾರ್ ಸ್ಪಷ್ಟಪಡಿಸಿದ್ದಾರೆ.