ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಪತ್ನಿ, ಹೆಣ್ಣು ಮಕ್ಕಳಿಬ್ಬರ ಕೊಂದು ಆತ್ಮಹತ್ಯೆಗೆ ಯತ್ನ 

Last Updated 2 ಮಾರ್ಚ್ 2023, 10:46 IST
ಅಕ್ಷರ ಗಾತ್ರ

ಬೆಂಗಳೂರು: ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ಪತ್ನಿ ವಿಜಯಲಕ್ಷ್ಮಿ ಹಾಗೂ ಮಕ್ಕಳಾದ ದೀಕ್ಷಾ, ನಿಶಾ ಅವರನ್ನು ಕೊಲೆ ಮಾಡಿರುವ ಆರೋಪಿ ನಾಗೇಂದ್ರ, ಕೃತ್ಯದ ಬಳಿಕ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

‘ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿರುವ ನಾಗೇಂದ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ದಕ್ಷಿಣ ವಿಭಾಗದ ಡಿಸಿಪಿ ಪಿ. ಕೃಷ್ಣಕಾಂತ್ ತಿಳಿಸಿದರು.

‘ದಂಪತಿ ನಡುವೆ ಹಲವು ದಿನಗಳಿಂದ ಜಗಳವಿತ್ತು. ಇದೇ ಕಾರಣಕ್ಕೆ ಆರೋಪಿ, ವಿಜಯಲಕ್ಷ್ಮಿ ಹಾಗೂ ಮಕ್ಕಳಿಬ್ಬರನ್ನು ಕೊಲೆ ಮಾಡಿರುವ ಅನುಮಾನವಿದೆ. ಆತ ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಬೇಕಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT