ಶಕ್ತಿಗಣಪತಿನಗರದಲ್ಲಿ ಆಟೊ ಚಾಲಕ ಸೋಂಕಿನಿಂದ ಮೃತಪಟ್ಟಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗ ಇದ್ದಾನೆ. ತಂದೆ ಮೃತಪಟ್ಟಿರುವ ಸುದ್ದಿ ತಿಳಿದ ಯುವತಿ, ಶಂಕರಮಠ ವಾರ್ಡ್ನ ಪಾಲಿಕೆ ಸದಸ್ಯ ಎಂ. ಶಿವರಾಜ್ ಅವರನ್ನು ಸಂಪರ್ಕಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿದರು. ಸುಮನಹಳ್ಳಿ ಚಿತಾಗಾರಕ್ಕೆ ಪಿಪಿಇ ಕಿಟ್ ಧರಿಸಿ ಬಂದು ಸ್ವತಃ ಮುಂದೆ ನಿಂತು ತಂದೆಯ ಅಂತ್ಯಕ್ರಿಯೆ ನೆರವೇರಿಸಿದರು.