ಬೆಂಗಳೂರು: ನಗರದ ಹಲವೆಡೆ ಮೊಬೈಲ್ಗಳನ್ನು ಕದ್ದು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಸಾಗರ್ (21) ಎಂಬುವವರನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ನೇಪಾಳದ ಸಾಗರ್, ಮಹದೇವಪುರದಲ್ಲಿ ನೆಲೆಸಿದ್ದ. ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ ಮಾಹಿತಿ ಇದೆ. ಈತನಿಂದ ₹ 2 ಲಕ್ಷ ಮೌಲ್ಯದ 18 ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಕಗ್ಗದಾಸನಪುರ ಬಾಲಾಜಿ ಬಡಾವಣೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರ ಮೊಬೈಲ್ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ’ ಎಂದು ತಿಳಿಸಿದರು.
‘ಕಿಟಕಿ ತೆರೆದಿರುತ್ತಿದ್ದ ಮನೆಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಜನರ ಮೊಬೈಲ್ಗಳನ್ನು ಆರೋಪಿ ಕಳ್ಳತನ ಮಾಡುತ್ತಿದ್ದ. ಕದ್ದ ಮೊಬೈಲ್ಗಳನ್ನು ಬೆನ್ನಿಗಾನಹಳ್ಳಿಯಲ್ಲಿ ರಸ್ತೆ ಮೇಲೆ ನಿಂತು ಮಾರಾಟ ಮಾಡುತ್ತಿದ್ದ’ ಎಂದು ಹೇಳಿದರು.