‘ಜುಲೈ 17ರಂದು ವಿದ್ಯಾರ್ಥಿಯು ಪರೀಕ್ಷೆಗೆ ಹಾಜರಾಗಿದ್ದ. ಆ ವೇಳೆ ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಬಳಕೆ ಮಾಡಿದ್ದರಿಂದ ಬುದ್ಧಿ ಹೇಳಲಾಗಿತ್ತು. ಪ್ರಕರಣ ಸಂಬಂಧ ವಿದ್ಯಾರ್ಥಿ ಪೋಷಕರು ದೂರು ದಾಖಲಿಸಿದ್ದಾರೆ. ತನಿಖೆ ಪ್ರಗತಿಯಲ್ಲಿರುವಾಗ ವಿಶ್ವವಿದ್ಯಾಲಯ ತನ್ನ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ ಎಂಬ ಕಾರಣಕ್ಕೆ ಮೌನ ವಹಿಸಲಾಗಿತ್ತು. ಆದರೆ, ಮಾಧ್ಯಮಗಳಲ್ಲಿ ತಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ನಡೆಯ ಬಗ್ಗೆ ಬೇರೆ ರೀತಿಯಲ್ಲಿ ಆರೋಪ ಮಾಡಲಾಗುತ್ತಿದೆ. ಸ್ಪಷ್ಟನೆ ನೀಡುವುದು ವಿ.ವಿಯ ಕರ್ತವ್ಯ. ಅಧಿಕಾರಿಗಳಿಗೂ ಹೃದಯವಿದೆ. ಮಾನವೀಯತೆ ಇದೆ’ ಎಂದು ಹೇಳಿದ್ದಾರೆ.