ಬೆಂಗಳೂರು: ‘ಕಬಡ್ಡಿ ಮತ್ತು ಕೊಕ್ಕೊ, ಗ್ರಾಮೀಣ ಕ್ರೀಡೆಗಳು. ಇವುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ವ್ಯಾಸಂಗದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತೆ ಪ್ರಾಧ್ಯಾಪಕರು ವಿದ್ಯಾರ್ಥಿಗಳನ್ನು ಉತ್ತೇಜಿಸಬೇಕು. ಓದಿನಷ್ಟೇ ಕ್ರೀಡೆಗೂ ಪ್ರಾಧಾನ್ಯತೆ ನೀಡಿದರೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಸಾಧ್ಯ’ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್.ದೊರೆಸ್ವಾಮಿ ತಿಳಿಸಿದರು.