ಪ್ರಸ್ತುತ ಕಾಡಾ ಆಡಳಿತಾಧಿಕಾರಿಯಾಗಿದ್ದ ಪೇಶ್ವೆ ಅವರನ್ನು ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದ್ದು, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಹುದ್ದೆಯ ಪ್ರಭಾರವನ್ನೂ ವಹಿಸಲಾಗಿದೆ. ಮಲಪ್ರಭಾ ಯೋಜನಾ ವಲಯದ ಮುಖ್ಯ ಎಂಜಿನಿಯರ್ ಹುದ್ದೆಗೆ ನೇಮಕಗೊಂಡ ಒಂದು ತಿಂಗಳಲ್ಲೇ ಅವರನ್ನು ಎತ್ತಂಗಡಿ ಮಾಡಿ, ಕಾಡಾ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.