<p><strong>ಬೆಂಗಳೂರು:</strong> ಯಶವಂತಪುರ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ಉದ್ಯಮಿ ದಿಲೀಪ್ (35) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.</p>.<p>‘ಪೆಟ್ರೋಲ್ ಬಂಕ್ವೊಂದರ ಮಾಲೀಕರಾಗಿದ್ದ ದಿಲೀಪ್ ಅವರ ಮೃತದೇಹ ಶುಕ್ರವಾರ ಬೆಳಿಗ್ಗೆ ಫ್ಲ್ಯಾಟ್ನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆಲ ದಿನಗಳ ಹಿಂದಷ್ಟೇ ಪತ್ನಿ ಜೊತೆ ದಿಲೀಪ್ ಜಗಳ ಮಾಡಿಕೊಂಡಿದ್ದರು. ನೊಂದ ಪತ್ನಿ, ಮನೆ ಬಿಟ್ಟು ಹೋಗಿದ್ದರು. ದಿಲೀಪ್ ಒಬ್ಬಂಟಿಯಾಗಿ ಮನೆಯಲ್ಲಿದ್ದರು.’</p>.<p>‘2–3 ದಿನಗಳ ಹಿಂದಷ್ಟೇ ದಿಲೀಪ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಉಸಿರಾಟ ಸಮಸ್ಯೆ ಇತ್ತು ಎಂಬುದು ಪರಿಚಯಸ್ಥರಿಂದ ಗೊತ್ತಾಗಿದೆ. ಮನೆಯಲ್ಲಿರುವ ಬೆಡ್ ಪಕ್ಕದಲ್ಲೇ ಮೃತದೇಹ ಇತ್ತು. ಗಂಟಲಿನ ದ್ರವ ಸಂಗ್ರಹಿಸಿರುವ ವೈದ್ಯರು, ಪರೀಕ್ಷೆಗಾಗಿ ಕಳುಹಿಸಿದ್ದಾರೆ’ ಎಂದೂ ತಿಳಿಸಿದರು.</p>.<p>‘ಘಟನಾ ಸ್ಥಳದ ಪರಿಶೀಲನೆ ನಡೆಸಲಾಗಿದೆ. ಮೃತದೇಹವಿದ್ದ ಕೊಠಡಿಯಲ್ಲಿ ರಕ್ತದ ಕಲೆಗಳು ಇವೆ. ಹೀಗಾಗಿ, ಸಾವಿನಲ್ಲಿ ಹಲವು ಅನುಮಾನಗಳು ಇವೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಶವಂತಪುರ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ಉದ್ಯಮಿ ದಿಲೀಪ್ (35) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.</p>.<p>‘ಪೆಟ್ರೋಲ್ ಬಂಕ್ವೊಂದರ ಮಾಲೀಕರಾಗಿದ್ದ ದಿಲೀಪ್ ಅವರ ಮೃತದೇಹ ಶುಕ್ರವಾರ ಬೆಳಿಗ್ಗೆ ಫ್ಲ್ಯಾಟ್ನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಎಲ್ಲ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಕೆಲ ದಿನಗಳ ಹಿಂದಷ್ಟೇ ಪತ್ನಿ ಜೊತೆ ದಿಲೀಪ್ ಜಗಳ ಮಾಡಿಕೊಂಡಿದ್ದರು. ನೊಂದ ಪತ್ನಿ, ಮನೆ ಬಿಟ್ಟು ಹೋಗಿದ್ದರು. ದಿಲೀಪ್ ಒಬ್ಬಂಟಿಯಾಗಿ ಮನೆಯಲ್ಲಿದ್ದರು.’</p>.<p>‘2–3 ದಿನಗಳ ಹಿಂದಷ್ಟೇ ದಿಲೀಪ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ತೀವ್ರ ಉಸಿರಾಟ ಸಮಸ್ಯೆ ಇತ್ತು ಎಂಬುದು ಪರಿಚಯಸ್ಥರಿಂದ ಗೊತ್ತಾಗಿದೆ. ಮನೆಯಲ್ಲಿರುವ ಬೆಡ್ ಪಕ್ಕದಲ್ಲೇ ಮೃತದೇಹ ಇತ್ತು. ಗಂಟಲಿನ ದ್ರವ ಸಂಗ್ರಹಿಸಿರುವ ವೈದ್ಯರು, ಪರೀಕ್ಷೆಗಾಗಿ ಕಳುಹಿಸಿದ್ದಾರೆ’ ಎಂದೂ ತಿಳಿಸಿದರು.</p>.<p>‘ಘಟನಾ ಸ್ಥಳದ ಪರಿಶೀಲನೆ ನಡೆಸಲಾಗಿದೆ. ಮೃತದೇಹವಿದ್ದ ಕೊಠಡಿಯಲ್ಲಿ ರಕ್ತದ ಕಲೆಗಳು ಇವೆ. ಹೀಗಾಗಿ, ಸಾವಿನಲ್ಲಿ ಹಲವು ಅನುಮಾನಗಳು ಇವೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>