ಬೆಂಗಳೂರು: ಗ್ರಾಹಕನ ಸೋಗಿನಲ್ಲಿ ಪೆಟ್ರೋಲ್ ಬಂಕ್ಗೆ ಬಂದಿದ್ದ ದುಷ್ಕರ್ಮಿಯೊಬ್ಬ ಸಿಬ್ಬಂದಿಯನ್ನು ಬೆದರಿಸಿ ಸುಲಿಗೆ ಮಾಡಿದ್ದು, ಈ ಸಂಬಂಧ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಬನ್ನೇರುಘಟ್ಟ ರಸ್ತೆಯ ಪೆಟ್ರೋಲ್ ಬಂಕ್ನಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಬಂಕ್ ಸಿಬ್ಬಂದಿ ಸ್ವರಾಜ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ದ್ವಿಚಕ್ರ ವಾಹನದಲ್ಲಿದ್ದ ಆರೋಪಿ, ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡಿದ್ದ. ಹಣ ನೀಡುವಂತೆ ಸಿಬ್ಬಂದಿ ಸ್ವರಾಜ್ ಕೇಳಿದ್ದರು. ಸಿಬ್ಬಂದಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪಿ, ಅವರ ಬಳಿ ₹ 4,500 ಕಸಿದುಕೊಂಡಿದ್ದ. ಸಿಬ್ಬಂದಿ ಕೂಗಾಡುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ತಿಳಿಸಿದರು.