‘ನಿಯಮಾವಳಿಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಾಗಿದೆ. ಆದರೆ, ಕೆಲವರು ಮಾತ್ರ ಪಾಲಿಸುತ್ತಾರೆ. ಸ್ವಚ್ಛತೆ ಕಾಪಾಡುತ್ತಿಲ್ಲ. ನಾಯಿಗಳಿಗೆ ಬೆಲ್ಟ್ ಹಾಕುತ್ತಿಲ್ಲ ಮತ್ತು ಎಲ್ಲೆಂದರಲ್ಲಿ ಗಲೀಜು ಮಾಡಿ ಪರಿಸರವನ್ನು ಹಾಳು ಮಾಡಲಾಗುತ್ತಿದೆ. ನಾಯಿಗಳಿಂದ ತೊಂದರೆಗೊಳಗಾದ 70ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದಾರೆ. ಹೀಗಾಗಿಯೇ ಉದ್ಯಾನದಲ್ಲಿ ನಾಯಿಗಳ ಪ್ರವೇಶವನ್ನು ನಿಷೇಧಿಸುವ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆಯ (ಕಬ್ಬನ್ ಉದ್ಯಾನ) ಉಪನಿರ್ದೇಶಕ ಎಚ್.ಟಿ. ಬಾಲಕೃಷ್ಣ ತಿಳಿಸಿದ್ದಾರೆ.