ಸೋಂಕು ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಬಹುತೇಕ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚು ಜನ ಸೇರುವೆಡೆ ಸೋಂಕು ಹರಡುವ ಸಾಧ್ಯತೆ ಇದ್ದು, ರಜೆ ಇರುವ ಕಾರಣ ಪಿ.ಜಿ ಕಟ್ಟಡಗಳಲ್ಲಿ ಉಳಿಯುವುದಕ್ಕಿಂತ ಮನೆಗಳಿಗೆ ಮರಳುವುದು ಸೂಕ್ತ ಎಂದು ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಇತ್ತೀಚೆಗೆ ಸಲಹೆ ನೀಡಿದ್ದರು. ಆದರೆ ಯಾರನ್ನೂ ಬಲವಂತವಾಗಿ ಕಳುಹಿಸಬಾರದು ಎಂದೂ ಕಟ್ಟುನಿಟ್ಟಾಗಿ ಸೂಚಿಸಿದ್ದರು.