<p><strong>ಬೆಂಗಳೂರು:</strong> ಆರೋಗ್ಯ ಕ್ಷೇತ್ರಕ್ಕೆ ಅಗತ್ಯವಾದ ತಂತ್ರಜ್ಞಾನ ನೀಡುವಲ್ಲಿ ಮುಂಚೂಣಿಯಲ್ಲಿರುವ ಫಿಲಿಪ್ಸ್ ಕಂಪನಿಯು, ಬೆಂಗಳೂರಿನ ಯಲಹಂಕ ಬಳಿ ತನ್ನ ಹೊಸ ನಾವೀನ್ಯ ಕೇಂದ್ರ (ಇನೊವೇಷನ್ ಕ್ಯಾಂಪಸ್) ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಈ ಕೇಂದ್ರವನ್ನು ಉದ್ಘಾಟಿಸಿದರು.</p>.<p>ಎಂಬಸಿ ಬಿಸಿನೆಸ್ ಹಬ್ನಲ್ಲಿ 6.5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಈ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಏಕಕಾಲಕ್ಕೆ 5 ಸಾವಿರ ವೃತ್ತಿಪರರು ಕೆಲಸ ಮಾಡಬಹುದಾದ ಸಾಮರ್ಥ್ಯವನ್ನು ಇದು ಹೊಂದಿದೆ. ರೋಗಿಗಳ ಆರೈಕೆ, ಉತ್ತಮ ಆರೋಗ್ಯ ಮತ್ತು ಆರೈಕೆಯ ವೆಚ್ಚ ಕಡಿಮೆ ಮಾಡುವಂತಹ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಇದು ನೆರವಾಗಲಿದೆ ಎಂದು ಕಂಪನಿ ತಿಳಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಪನಿಯ ಸಿಇಒ ರಾಯ್ ಜಾಕೋಬ್ಸ್, ‘ಭಾರತದಲ್ಲಿ ನಮ್ಮ ಸಾಮರ್ಥ್ಯಗಳನ್ನು ಮತ್ತಷ್ಟು ವಿಸ್ತರಿಸಲು ಇದು ಅನುಕೂಲ ಮಾಡಿಕೊಡಲಿದೆ. ಆರೋಗ್ಯ ರಕ್ಷಣೆಯ ಪರಿಹಾರಗಳನ್ನು ನೀಡುವುದಲ್ಲದೆ ಹೊಸ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದರು</p>.<p>‘ಕಂಪನಿಯ ಜಾಗತಿಕ ಬೆಳವಣಿಗೆಯ ಹಾದಿಯಲ್ಲಿ ಬೆಂಗಳೂರಿನ ಈ ಕೇಂದ್ರವು ಹೆಗ್ಗುರುತು ಆಗುವ ಜೊತೆಗೆ ಭಾರತದಲ್ಲಿ ಆರೋಗ್ಯಸೇವೆಯ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರೋಗ್ಯ ಕ್ಷೇತ್ರಕ್ಕೆ ಅಗತ್ಯವಾದ ತಂತ್ರಜ್ಞಾನ ನೀಡುವಲ್ಲಿ ಮುಂಚೂಣಿಯಲ್ಲಿರುವ ಫಿಲಿಪ್ಸ್ ಕಂಪನಿಯು, ಬೆಂಗಳೂರಿನ ಯಲಹಂಕ ಬಳಿ ತನ್ನ ಹೊಸ ನಾವೀನ್ಯ ಕೇಂದ್ರ (ಇನೊವೇಷನ್ ಕ್ಯಾಂಪಸ್) ಆರಂಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಈ ಕೇಂದ್ರವನ್ನು ಉದ್ಘಾಟಿಸಿದರು.</p>.<p>ಎಂಬಸಿ ಬಿಸಿನೆಸ್ ಹಬ್ನಲ್ಲಿ 6.5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಈ ಕ್ಯಾಂಪಸ್ ನಿರ್ಮಾಣ ಮಾಡಲಾಗಿದೆ. ಏಕಕಾಲಕ್ಕೆ 5 ಸಾವಿರ ವೃತ್ತಿಪರರು ಕೆಲಸ ಮಾಡಬಹುದಾದ ಸಾಮರ್ಥ್ಯವನ್ನು ಇದು ಹೊಂದಿದೆ. ರೋಗಿಗಳ ಆರೈಕೆ, ಉತ್ತಮ ಆರೋಗ್ಯ ಮತ್ತು ಆರೈಕೆಯ ವೆಚ್ಚ ಕಡಿಮೆ ಮಾಡುವಂತಹ ಹೊಸ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಇದು ನೆರವಾಗಲಿದೆ ಎಂದು ಕಂಪನಿ ತಿಳಿಸಿದೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಪನಿಯ ಸಿಇಒ ರಾಯ್ ಜಾಕೋಬ್ಸ್, ‘ಭಾರತದಲ್ಲಿ ನಮ್ಮ ಸಾಮರ್ಥ್ಯಗಳನ್ನು ಮತ್ತಷ್ಟು ವಿಸ್ತರಿಸಲು ಇದು ಅನುಕೂಲ ಮಾಡಿಕೊಡಲಿದೆ. ಆರೋಗ್ಯ ರಕ್ಷಣೆಯ ಪರಿಹಾರಗಳನ್ನು ನೀಡುವುದಲ್ಲದೆ ಹೊಸ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗುವುದು’ ಎಂದು ಹೇಳಿದರು</p>.<p>‘ಕಂಪನಿಯ ಜಾಗತಿಕ ಬೆಳವಣಿಗೆಯ ಹಾದಿಯಲ್ಲಿ ಬೆಂಗಳೂರಿನ ಈ ಕೇಂದ್ರವು ಹೆಗ್ಗುರುತು ಆಗುವ ಜೊತೆಗೆ ಭಾರತದಲ್ಲಿ ಆರೋಗ್ಯಸೇವೆಯ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>