ಬೆಂಗಳೂರು: ‘ನೀಲಗಿರಿ ಮರಗಳಿಂದ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾಡು ಪ್ರಾಣಿಗಳಿಗೆ ಮೇವು ಸಿಗುತ್ತಿಲ್ಲ. ಹಾಗಾಗಿ, ನೀಲಗಿರಿ ಮರಗಳನ್ನು ತೆರವುಗೊಳಿಸಿ ಕಾಡಿನಲ್ಲಿ ಹೂ, ಹಣ್ಣು, ಹಾಗೂ ಆರೋಗ್ಯವರ್ಧಕ ಗಿಡಗಳನ್ನು ನೆಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಉದ್ಯಮಿಗಳು ಹಾಗೂ ಸಂಸ್ಥೆಗಳು ಕೈಜೋಡಿಸಬೇಕು’ಎಂದು ಅರಣ್ಯ ಸಚಿವಅರವಿಂದ ಲಿಂಬಾವಳಿ ಮನವಿ ಮಾಡಿದರು.