ಉಪಮೇಯರ್ ಭದ್ರೇಗೌಡ, ‘ಹವ್ಯಾಸಿ ಛಾಯಾಗ್ರಾಹಕರಿಗೆ ಹೋಲಿಸಿದರೆ ಪತ್ರಿಕಾ ಛಾಯಾಗ್ರಾಹಕರಿಗೆ ಸ್ವಾತಂತ್ರ್ಯ ಕಡಿಮೆ ಇರುತ್ತದೆ. ಅವರು ತಮ್ಮ ಕುಟುಂಬದವರ ಸಮಸ್ಯೆಗಳಿಗೆ ಸ್ಪಂದಿಸಲು ಹೆಚ್ಚು ಸಮಯವೂ ಇರುವುದಿಲ್ಲ. ಅವರಿಗೆ ಆರ್ಥಿಕ ಸಮಸ್ಯೆ ಹೆಚ್ಚಾಗಿದೆ. ಇವರಿಗೆ ನೆರವು ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು’ ಎಂದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತಂತ್ರಜ್ಞ ನರಸಿಂಹ ಅವರಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.