<p><strong>ಬೆಂಗಳೂರು</strong>: ‘ಆಧುನಿಕ ಯುಗದಲ್ಲಿ ಡಿಜಿಟಲ್ ತಂತ್ರಜ್ಞಾನವು ಫೋಟೋಗ್ರಫಿಯನ್ನು ಸುಲಭಗೊಳಿಸಿದೆ’ ಎಂದು ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಸಮೂಹದ ನಿರ್ದೇಶಕ ಕೆ.ಎನ್. ಶಾಂತಕುಮಾರ್ ಹೇಳಿದರು. </p>.<p>‘ಬೆಂಗಳೂರು ಫೋಟೋ ಜರ್ನಲಿಸ್ಟ್ಗಳ ಸಂಘ’ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಫೋಟೋಗ್ರಫಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಹಿಂದೆ ಛಾಯಾಚಿತ್ರವನ್ನು ಸೆರೆಹಿಡಿಯುವುದರಿಂದ ಹಿಡಿದು, ಅದನ್ನು ಅಭಿವೃದ್ಧಿಪಡಿಸುವುದು ಮತ್ತು ಮುದ್ರಿಸುವವರೆಗೆ ಹೆಚ್ಚು ಸಮಯ ಹಾಗೂ ಶ್ರಮ ಬೇಕಾಗುತ್ತಿತ್ತು. ಆಧುನಿಕ ಯುಗವು ಫೋಟೋಗ್ರಫಿಯನ್ನು ಸುಲಭಗೊಳಿಸಿದೆ. ಛಾಯಾಗ್ರಾಹಕರು ವಿಮರ್ಶಾತ್ಮಕವಾಗಿ ಯೋಚಿಸಲು ಮತ್ತು ಉತ್ತಮ ಚಿತ್ರಗಳನ್ನು ಸೆರೆ ಹಿಡಿಯಲು ಹೆಚ್ಚಿನ ಸಮಯಾವಕಾಶವೂ ದೊರೆಯುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಪ್ರತಿಯೊಬ್ಬರ ಬಳಿ ಇರುವ ಮೊಬೈಲ್ನಲ್ಲಿ ಕ್ಯಾಮೆರಾ ಇದ್ದರೂ, ಎಲ್ಲರೂ ಛಾಯಾಗ್ರಾಹಕರಾಗಲು ಸಾಧ್ಯವಿಲ್ಲ. ಒಬ್ಬ ಒಳ್ಳೆಯ ಛಾಯಾಗ್ರಾಹಕ ಬೆಳಕನ್ನು ಅರ್ಥಮಾಡಿಕೊಳ್ಳಬೇಕು. ಕ್ಯಾಮೆರಾ ಸೆಟ್ಟಿಂಗ್ಗಳನ್ನು ತಿಳಿದುಕೊಳ್ಳಬೇಕು. ಜನರ ಕಥೆಗಳನ್ನು ಹೇಳುವಾಗ ನೈತಿಕತೆ, ಸಮಗ್ರತೆ, ಸತ್ಯ ಮತ್ತು ಸಹಾನುಭೂತಿಗೆ ಬದ್ಧರಾಗಿರಬೇಕು. ಛಾಯಾಗ್ರಹಣದಲ್ಲಿ ಸಮಯವು ನಿರ್ಣಾಯಕ’ ಎಂದರು. </p>.<p>ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ‘ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ. ಮಗು ಮಾತನಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ’ ಎಂದು ಅಭಿಪ್ರಾಯಪಟ್ಟರು. </p>.<p>ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನುಂ, ಪತ್ರಕರ್ತ ಸದಾಶಿವ ಶೆಣೈ, ಸಂಘದ ಅಧ್ಯಕ್ಷ ಬಿ.ಎನ್. ಮೋಹನ್ ಕುಮಾರ್, ಛಾಯಾಗ್ರಾಹಕ ಭಾಗ್ಯ ಪ್ರಕಾಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆಧುನಿಕ ಯುಗದಲ್ಲಿ ಡಿಜಿಟಲ್ ತಂತ್ರಜ್ಞಾನವು ಫೋಟೋಗ್ರಫಿಯನ್ನು ಸುಲಭಗೊಳಿಸಿದೆ’ ಎಂದು ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಸಮೂಹದ ನಿರ್ದೇಶಕ ಕೆ.ಎನ್. ಶಾಂತಕುಮಾರ್ ಹೇಳಿದರು. </p>.<p>‘ಬೆಂಗಳೂರು ಫೋಟೋ ಜರ್ನಲಿಸ್ಟ್ಗಳ ಸಂಘ’ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. </p>.<p>‘ಫೋಟೋಗ್ರಫಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಹಿಂದೆ ಛಾಯಾಚಿತ್ರವನ್ನು ಸೆರೆಹಿಡಿಯುವುದರಿಂದ ಹಿಡಿದು, ಅದನ್ನು ಅಭಿವೃದ್ಧಿಪಡಿಸುವುದು ಮತ್ತು ಮುದ್ರಿಸುವವರೆಗೆ ಹೆಚ್ಚು ಸಮಯ ಹಾಗೂ ಶ್ರಮ ಬೇಕಾಗುತ್ತಿತ್ತು. ಆಧುನಿಕ ಯುಗವು ಫೋಟೋಗ್ರಫಿಯನ್ನು ಸುಲಭಗೊಳಿಸಿದೆ. ಛಾಯಾಗ್ರಾಹಕರು ವಿಮರ್ಶಾತ್ಮಕವಾಗಿ ಯೋಚಿಸಲು ಮತ್ತು ಉತ್ತಮ ಚಿತ್ರಗಳನ್ನು ಸೆರೆ ಹಿಡಿಯಲು ಹೆಚ್ಚಿನ ಸಮಯಾವಕಾಶವೂ ದೊರೆಯುತ್ತಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಪ್ರತಿಯೊಬ್ಬರ ಬಳಿ ಇರುವ ಮೊಬೈಲ್ನಲ್ಲಿ ಕ್ಯಾಮೆರಾ ಇದ್ದರೂ, ಎಲ್ಲರೂ ಛಾಯಾಗ್ರಾಹಕರಾಗಲು ಸಾಧ್ಯವಿಲ್ಲ. ಒಬ್ಬ ಒಳ್ಳೆಯ ಛಾಯಾಗ್ರಾಹಕ ಬೆಳಕನ್ನು ಅರ್ಥಮಾಡಿಕೊಳ್ಳಬೇಕು. ಕ್ಯಾಮೆರಾ ಸೆಟ್ಟಿಂಗ್ಗಳನ್ನು ತಿಳಿದುಕೊಳ್ಳಬೇಕು. ಜನರ ಕಥೆಗಳನ್ನು ಹೇಳುವಾಗ ನೈತಿಕತೆ, ಸಮಗ್ರತೆ, ಸತ್ಯ ಮತ್ತು ಸಹಾನುಭೂತಿಗೆ ಬದ್ಧರಾಗಿರಬೇಕು. ಛಾಯಾಗ್ರಹಣದಲ್ಲಿ ಸಮಯವು ನಿರ್ಣಾಯಕ’ ಎಂದರು. </p>.<p>ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ‘ನೋಟಕ್ಕೆ ಹೃದಯವಂತಿಕೆಯ ಸ್ಪರ್ಶ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ. ಮಗು ಮಾತನಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ’ ಎಂದು ಅಭಿಪ್ರಾಯಪಟ್ಟರು. </p>.<p>ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನುಂ, ಪತ್ರಕರ್ತ ಸದಾಶಿವ ಶೆಣೈ, ಸಂಘದ ಅಧ್ಯಕ್ಷ ಬಿ.ಎನ್. ಮೋಹನ್ ಕುಮಾರ್, ಛಾಯಾಗ್ರಾಹಕ ಭಾಗ್ಯ ಪ್ರಕಾಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>