ಪ್ರಶಸ್ತಿ ಪ್ರದಾನದ ವೇಳೆ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅವರಿಗೆ ಮನವಿ ಸಲ್ಲಿಸಲು ಮುಂದಾದ ವಿಶ್ವವಿದ್ಯಾಲಯದ ಕಾಲೇಜು ದೈಹಿಕ ಶಿಕ್ಷಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ಬಿ.ಟಿ.ನಾಗೇಂದ್ರ ಕುಮಾರ್ ಹಾಗೂ ಉಪಾಧ್ಯಕ್ಷ ಡಾ.ಬಸವಯ್ಯ ಕೆ.ಎಂ., ‘ರಾಷ್ಟ್ರ ಮಟ್ಟವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೂ ಅಗತ್ಯ ತರಬೇತಿ ಹಾಗೂ ಆರ್ಥಿಕ ನೆರವು ಸಿಗುತ್ತಿಲ್ಲ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಿದ್ದ ಪ್ರತಿಭೆಗಳು ಹೇಳ ಹೆಸರಿಲ್ಲದಂತಾಗುತ್ತಿದ್ದಾರೆ. ವಿಶ್ವವಿದ್ಯಾಲಯದಲ್ಲಿರುವ ಕ್ರೀಡಾಂಗಣಗಳಲ್ಲೇ ಮೂಲ ಸೌಕರ್ಯ ಕೊರತೆ ತಾಂಡವವಾಡುತ್ತಿದೆ’ ಎಂದು ದೂರಿದರು.