ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ನಿಲ್ದಾಣಕ್ಕೆ ಚಿತ್ರ –ಚಿತ್ತಾರ

Last Updated 28 ಫೆಬ್ರುವರಿ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವನ್ನು ಚಿತ್ರ– ಚಿತ್ತಾರಗಳಿಂದ ಅಲಂಕರಿಸಲಾಗಿದೆ. ನಿಲ್ದಾಣ ಪ್ರವೇಶಿಸುವ ಪ್ರಯಾಣಿಕರಿಗೆ ಆಹ್ಲಾದಕರ ಅನುಭವ ನೀಡುವ ನಿಟ್ಟಿನಲ್ಲಿ ಇಲಾಖೆಯು ಈ ಕ್ರಮ ಕೈಗೊಂಡಿದೆ.

ಸ್ಥಳೀಯ ಕಲಾವಿದರ ಮೂಲಕ ಇಲ್ಲಿ ಕಲಾಕೃತಿಗಳನ್ನು ರಚಿಸಲಾಗಿದೆ. ಮೈಸೂರು ಗಂಜೀಫಾ ಚಿತ್ರಕಲೆ, ಉತ್ತರ ಕರ್ನಾಟಕದ ‘ಚಿತ್ತಾರ’ ಕಲಾ ಕೃತಿಗಳನ್ನು ನಿಲ್ದಾಣದ ಪ್ರಮುಖ ಪ್ರದೇಶಗಳಲ್ಲಿ ಬಿಡಿಸಲಾಗಿದೆ.

ಚಿತ್ತಾರ ಕಲೆಯಲ್ಲಿ ರಾಜ್ಯದ ಗ್ರಾಮೀಣ ಜನಜೀವನವನ್ನು ಚಿತ್ರಿಸ ಲಾಗಿದೆ. ಪ್ಲಾಟ್‌ ಫಾರಂ 1ರಲ್ಲಿ ಸಾಂಪ್ರ
ಡದಾಯಿಕ ಗೊಂಬೆ ಕಲೆಗಳ ಕೃತಿಗಳನ್ನೂ ಕಾಣಬಹುದು. ಉತ್ತರ ಕರ್ನಾಟಕದ ಜನಜೀವನವನ್ನೂ ಇಲ್ಲಿ ಚಿತ್ರಿಸಲಾಗಿದೆ. ಹವಾನಿಯಂತ್ರಿತ ಭವನದಲ್ಲಿ ರಾಜ್ಯದ ವಿವಿಧ ಸಾಂಪ್ರದಾಯಿಕ ನೃತ್ಯ ಪ್ರಕಾರಗಳ ಚಿತ್ರಗಳನ್ನೂ ಕಾಣಬಹುದು.

ಬೆಂಗಳೂರು ಅರಮನೆಯ ಮೂರು ಆಯಾಮಗಳ ಕಲಾಕೃತಿಯನ್ನು ಮುಖ್ಯ ಪ್ರಾಂಗಣದಲ್ಲಿ ಇರಿಸಲಾಗಿದೆ. ವಿಶೇಷ ದೀಪಾಲಂಕಾರವೂ ಈ ಕೃತಿಗೆ ಇದೆ. ಸ್ಥಳೀಯ ಕಲಾವಿದರ ನೆರವಿನೊಂದಿಗೆ ಸೃಷ್ಟಿ ಆರ್ಟ್ಸ್‌ನ ಸುಮಂಗಲಾ ಭಟ್‌ ಅವರು ಇಲ್ಲಿ ಕಲಾಕೃತಿಗಳನ್ನು ರಚಿಸಿದ್ದಾರೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವೂ ಹಲವು ಎನ್‌ಜಿಒ ಮತ್ತು ಕಾರ್ಪೊರೇಟ್‌ ಸಂಸ್ಥೆಗಳೂ ಈ ಕಾರ್ಯದಲ್ಲಿ ತೊಡಗಿವೆ. ಸಬ್‌ವೇಯನ್ನು ವರ್ಲಿ, ಚಿತ್ತಾರ ಕಲೆಗಳಿಂದ, ನಿಲ್ದಾಣದ ಗೋಡೆಗಳನ್ನು ಕಲಾಂಕಾರಿ ಕಲೆ, ತಂಜಾವೂರು ಶೈಲಿಯ ಕಲಾಕೃತಿಗಳಿಂದ ಅಲಂಕರಿಸಲಾಗಿದೆ.

ಬೆಂಗಳೂರು ದಂಡು, ಹಿಂದೂಪುರ, ರಾಮನಗರ ನಿಲ್ದಾಣಗಳಲ್ಲೂ ಇದೇ ರೀತಿ ಕಲಾಕೃತಿಗಳ ಅಲಂಕಾರ ಮಾಡಲಾಗುವುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT