ಈ ಕುರಿತಂತೆ ದಲಿತ ಸಂಘರ್ಷ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಅರ್ಜಿದಾರರು ಬಡವರು ಹಾಗೂ ನಿರ್ಗತಿಕರು ಇರಬಹುದು. ಅವರು ವಾಸವಿದ್ದ ಜಾಗದ ಮೇಲೆ ಅವರಿಗೆ ಯಾವುದೇ ಹಕ್ಕು ಇರಲಿಲ್ಲ. ಅಂತೆಯೇಸರ್ಕಾರಿ ಗೋಮಾಳ ಅತಿಕ್ರಮಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ, ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೇಳಿದೆ.