<p><strong>ಬೆಂಗಳೂರು: </strong>2020ರ ಬಿಬಿಎಂಪಿ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಹೊಸ ಕಾಯ್ದೆ ಅಸಂವಿಧಾನಿಕ ಮತ್ತು ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ (ಕೆಎಂಸಿ) ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.</p>.<p>ಸಾಮಾಜಿಕ ಕಾರ್ಯಕರ್ತ ಎಲ್.ಎಸ್. ಮಲ್ಲಿಕಾರ್ಜುನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದೆ.</p>.<p>‘ಸಂವಿಧಾನದ 243 ಕ್ಯೂ ವಿಧಿಯ ಪ್ರಕಾರ ಪುರಸಭೆಗಳಿಗೆ ಇರುವ ನಿಯಮಾವಳಿಗಳೇ ಪಾಲಿಕೆಗಳಿಗೂ ಅನ್ವಯವಾಗಲಿದೆ. ಪ್ರತ್ಯೇಕ ಕಾಯ್ದೆ ರೂಪಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ’ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.</p>.<p>ಹೊಸ ಕಾಯ್ದೆಯಲ್ಲಿ ಜಾಹೀರಾತು ಶುಲ್ಕಕ್ಕೆ ಅವಕಾಶವಿದೆ. ಅರ್ಜಿದಾರರ ಪ್ರಕಾರ, ಈ ನಿಬಂಧನೆಯು ಕೆಎಂಸಿ ಕಾಯ್ದೆಗೆ ವಿರುದ್ಧವಾಗಿದೆ. ‘ಕರ್ನಾಟಕ ನಗರ ಯೋಜನೆ ಕಾಯ್ದೆಗೆ ವಿರುದ್ಧವಾಗಿ ಕಾನೂನು ಬಾಹಿರವಾಗಿ ಕಟ್ಟಿದ ಕಟ್ಟಡಗಳನ್ನು ಕ್ರಮಬದ್ಧಗೊಳಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>2020ರ ಬಿಬಿಎಂಪಿ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಹೊಸ ಕಾಯ್ದೆ ಅಸಂವಿಧಾನಿಕ ಮತ್ತು ಕರ್ನಾಟಕ ಮುನ್ಸಿಪಲ್ ಕಾಯ್ದೆಗೆ (ಕೆಎಂಸಿ) ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ.</p>.<p>ಸಾಮಾಜಿಕ ಕಾರ್ಯಕರ್ತ ಎಲ್.ಎಸ್. ಮಲ್ಲಿಕಾರ್ಜುನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದೆ.</p>.<p>‘ಸಂವಿಧಾನದ 243 ಕ್ಯೂ ವಿಧಿಯ ಪ್ರಕಾರ ಪುರಸಭೆಗಳಿಗೆ ಇರುವ ನಿಯಮಾವಳಿಗಳೇ ಪಾಲಿಕೆಗಳಿಗೂ ಅನ್ವಯವಾಗಲಿದೆ. ಪ್ರತ್ಯೇಕ ಕಾಯ್ದೆ ರೂಪಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ’ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.</p>.<p>ಹೊಸ ಕಾಯ್ದೆಯಲ್ಲಿ ಜಾಹೀರಾತು ಶುಲ್ಕಕ್ಕೆ ಅವಕಾಶವಿದೆ. ಅರ್ಜಿದಾರರ ಪ್ರಕಾರ, ಈ ನಿಬಂಧನೆಯು ಕೆಎಂಸಿ ಕಾಯ್ದೆಗೆ ವಿರುದ್ಧವಾಗಿದೆ. ‘ಕರ್ನಾಟಕ ನಗರ ಯೋಜನೆ ಕಾಯ್ದೆಗೆ ವಿರುದ್ಧವಾಗಿ ಕಾನೂನು ಬಾಹಿರವಾಗಿ ಕಟ್ಟಿದ ಕಟ್ಟಡಗಳನ್ನು ಕ್ರಮಬದ್ಧಗೊಳಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>