‘ಶ್ರೀರಾಮಪುರ ಹಾಗೂ ಸುತ್ತಮತ್ತಲಿನ ಪ್ರದೇಶಗಳಲ್ಲಿ ಡ್ರಗ್ಸ್ ಮಾರುತ್ತಿದ್ದ ನಾರಾಯಣ, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದ. ಜಾಮೀನು ಷರತ್ತುಗಳನ್ನೂ ಉಲ್ಲಂಘಿಸುತ್ತಿದ್ದ. ಹೀಗಾಗಿ, ಈತನನ್ನು ಪಿಐಟಿ–ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲು ಕೋರಿ ಕಮಿಷನರ್ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಒಪ್ಪಿಗೆ ನೀಡಿರುವ ಕಮಿಷನರ್, ತಮ್ಮ ಅಧಿಕಾರ ಚಲಾಯಿಸಿ ಆರೋಪಿಯನ್ನು ಒಂದು ವರ್ಷ ಜೈಲಿನಲ್ಲಿಡಲು ಆದೇಶಿಸಿದ್ದಾರೆ’ ಎಂದು ತಿಳಿಸಿವೆ.