ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನ್ಯಾಯಾಧೀಶರಿಗೆ ಸ್ಥಳ ನಿಯೋಜನೆ

Last Updated 13 ಜನವರಿ 2023, 20:22 IST
ಅಕ್ಷರ ಗಾತ್ರ

ಬೆಂಗಳೂರು: ಹೊಸದಾಗಿ ನೇಮಕಗೊಂಡಿರುವ ಜಿಲ್ಲಾ ನ್ಯಾಯಾಧೀಶರಿಗೆ ಹುದ್ದೆ ತೋರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಬಿ.ಮುರಳೀಧರ ಪೈ ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ನಿಯೋಜಿತ ನ್ಯಾಯಾಧೀಶರು ಇದೇ 16ರ ಬೆಳಿಗ್ಗೆ ಅಧಿಕಾರ ವಹಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಗಂಗಪ್ಪ ಈರಪ್ಪ ಪಾಟೀಲ್ ಅವರಿಗೆ ಬೆಂಗಳೂರು ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಸುಮಂಗಲ ಚಾಕಲಬ್ಬಿ ಅವರಿಗೆ 41ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಎನ್.ಆರ್. ಮಧು ಅವರಿಗೆ 30ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ಎ. ಸಿರಾಜುದ್ದೀನ್ ಅವರಿಗೆ 20ನೇ ಹೆಚ್ಚುವರಿ ಮತ್ತು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿಯೋಜಿಸಲಾಗಿದೆ.

ಆನಂದ ಅವರಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಡಿ.ಸರಿತಾ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮತ್ತು ಬಿ.ಎಲ್. ಮಾಯಣ್ಣ ಅವರಿಗೆ ಉತ್ತರ ಕನ್ನಡ ಜಿಲ್ಲೆಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಹುದ್ದೆಗೆ ನಿಯೊಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT