<p><strong>ಬೆಂಗಳೂರು</strong>: ನಗರದ ಎಂ.ಎಸ್.ರಾಮಯ್ಯ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಎಂ.ಎಸ್. ರಾಮಯ್ಯ ವಿದ್ಯಾನಿಕೇತನದಲ್ಲಿ ‘ರಾಮಯ್ಯ ಖಗೋಳ ವೀಕ್ಷಣಾಲಯ’ ವನ್ನು ಆರಂಭಿಸಲಾಗಿದ್ದು, ಇತ್ತೀಚೆಗೆ ಅದನ್ನು ಉದ್ಘಾಟಿಸಲಾಯಿತು.</p>.<p>ಇದು ಐದು ಮೀಟರ್ ಎತ್ತರದ ಬಾಹ್ಯಾಕಾಶ ವೀಕ್ಷಣಾಲಯವಾಗಿದೆ. ಇದರಲ್ಲಿ 12-ಇಂಚಿನ ಪ್ರತಿಫಲಕ (ರಿಫ್ಲೆಕ್ಟರ್) ಟೆಲಿಸ್ಕೋಪ್ ಇದೆ.</p>.<p>ಇತ್ತೀಚೆಗೆ ನಡೆದ ಖಗೋಳ ವೀಕ್ಷಣಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೋಕುಲ ಶಿಕ್ಷಣ ಪ್ರತಿಷ್ಠಾನದ (ಜಿಇಎಫ್) ಮುಖ್ಯ ಶೈಕ್ಷಣಿಕ ಸಲಹೆಗಾರ ಕರಿಸಿದ್ದಪ್ಪ, ‘ವಿದ್ಯಾರ್ಥಿಗಳಿಗೆ ಬಾಹ್ಯಾಕಾಶದ ಬಗೆಗೆ ಅರಿವು ಮೂಡಿಸುತ್ತದೆ. ಮಾತ್ರವಲ್ಲ, ಖಗೋಳ ಕುರಿತು ಹೊಸ ವಿಚಾರಗಳನ್ನು ತಿಳಿಯುವ ಉತ್ಸಾಹವನ್ನು ಮೂಡಿಸುತ್ತದೆ’ ಎಂದು ತಿಳಿಸಿದರು.</p>.<p>ರಾಮಯ್ಯ ಖಗೋಳ ವೀಕ್ಷಣಾಲಯವು ಕೇವಲ ರಾಮಯ್ಯ ವಿದ್ಯಾನಿಕೇತನದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇತರ ಶಿಕ್ಷಣ ಸಂಸ್ಥೆಗಳೊಂದಿಗೆ ಸಂವಹನ ಕಾರ್ಯಕ್ರಮಗಳು ಮತ್ತು ಸಹಯೋಗಗಳಿಗೆ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಸಹ ಹೊಂದಿದೆ ಎಂದು ಶಾಲೆಯ ಪ್ರಾಚಾರ್ಯೆ ಶಾಂತಿ ಹೇಳಿದರು. </p>.<p>ಕಾರ್ಯಕ್ರಮದಲ್ಲಿ ಜಿಇಎಫ್ ಅಧ್ಯಕ್ಷ ಡಾ. ಎಂ.ಆರ್. ಸೀತಾರಾಮ್, ಉಪಾಧ್ಯಕ್ಷ ಎಂ.ಆರ್. ಜಾನಕಿರಾಮ್, ಕಾರ್ಯದರ್ಶಿ ಎಂ.ಆರ್. ಆನಂದರಾಮ್, ಸಿಎಫ್ಒ ಜಿ ರಾಮಚಂದ್ರ ಮತ್ತು ಸಿಇಒ ಪಾರ್ಶ್ವನಾಥ್ ಎಚ್.ವಿ. ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಎಂ.ಎಸ್.ರಾಮಯ್ಯ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಎಂ.ಎಸ್. ರಾಮಯ್ಯ ವಿದ್ಯಾನಿಕೇತನದಲ್ಲಿ ‘ರಾಮಯ್ಯ ಖಗೋಳ ವೀಕ್ಷಣಾಲಯ’ ವನ್ನು ಆರಂಭಿಸಲಾಗಿದ್ದು, ಇತ್ತೀಚೆಗೆ ಅದನ್ನು ಉದ್ಘಾಟಿಸಲಾಯಿತು.</p>.<p>ಇದು ಐದು ಮೀಟರ್ ಎತ್ತರದ ಬಾಹ್ಯಾಕಾಶ ವೀಕ್ಷಣಾಲಯವಾಗಿದೆ. ಇದರಲ್ಲಿ 12-ಇಂಚಿನ ಪ್ರತಿಫಲಕ (ರಿಫ್ಲೆಕ್ಟರ್) ಟೆಲಿಸ್ಕೋಪ್ ಇದೆ.</p>.<p>ಇತ್ತೀಚೆಗೆ ನಡೆದ ಖಗೋಳ ವೀಕ್ಷಣಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಗೋಕುಲ ಶಿಕ್ಷಣ ಪ್ರತಿಷ್ಠಾನದ (ಜಿಇಎಫ್) ಮುಖ್ಯ ಶೈಕ್ಷಣಿಕ ಸಲಹೆಗಾರ ಕರಿಸಿದ್ದಪ್ಪ, ‘ವಿದ್ಯಾರ್ಥಿಗಳಿಗೆ ಬಾಹ್ಯಾಕಾಶದ ಬಗೆಗೆ ಅರಿವು ಮೂಡಿಸುತ್ತದೆ. ಮಾತ್ರವಲ್ಲ, ಖಗೋಳ ಕುರಿತು ಹೊಸ ವಿಚಾರಗಳನ್ನು ತಿಳಿಯುವ ಉತ್ಸಾಹವನ್ನು ಮೂಡಿಸುತ್ತದೆ’ ಎಂದು ತಿಳಿಸಿದರು.</p>.<p>ರಾಮಯ್ಯ ಖಗೋಳ ವೀಕ್ಷಣಾಲಯವು ಕೇವಲ ರಾಮಯ್ಯ ವಿದ್ಯಾನಿಕೇತನದ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇತರ ಶಿಕ್ಷಣ ಸಂಸ್ಥೆಗಳೊಂದಿಗೆ ಸಂವಹನ ಕಾರ್ಯಕ್ರಮಗಳು ಮತ್ತು ಸಹಯೋಗಗಳಿಗೆ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಸಹ ಹೊಂದಿದೆ ಎಂದು ಶಾಲೆಯ ಪ್ರಾಚಾರ್ಯೆ ಶಾಂತಿ ಹೇಳಿದರು. </p>.<p>ಕಾರ್ಯಕ್ರಮದಲ್ಲಿ ಜಿಇಎಫ್ ಅಧ್ಯಕ್ಷ ಡಾ. ಎಂ.ಆರ್. ಸೀತಾರಾಮ್, ಉಪಾಧ್ಯಕ್ಷ ಎಂ.ಆರ್. ಜಾನಕಿರಾಮ್, ಕಾರ್ಯದರ್ಶಿ ಎಂ.ಆರ್. ಆನಂದರಾಮ್, ಸಿಎಫ್ಒ ಜಿ ರಾಮಚಂದ್ರ ಮತ್ತು ಸಿಇಒ ಪಾರ್ಶ್ವನಾಥ್ ಎಚ್.ವಿ. ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>