ರೋಗಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆಯನ್ನುಕ್ಯಾನ್ಸರ್ ತಜ್ಞ ಡಾ.ಯು.ಎಸ್. ವಿಶಾಲ್ ರಾವ್ ನೇತೃತ್ವದ ವೈದ್ಯರ ತಂಡಸೋಮವಾರ ಪ್ರಾರಂಭಿಸಲಿದೆ. ಸಾವಿನ ಪ್ರಮಾಣವನ್ನು ತಡೆಯುವ ನಿಟ್ಟಿನಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ನಡೆಸಲಾಗುತ್ತಿದ್ದು, ಫಲಿತಾಂಶ ಸಕಾರಾತ್ಮಕವಾಗಿ ಬಂದಲ್ಲಿ ಮಾತ್ರ ಚಿಕಿತ್ಸೆ ಮುಂದುವರಿಸಲು ಅನುಮತಿ ದೊರೆಯುತ್ತದೆ.ಕೊರೊನಾ ಸೋಂಕಿತರಲ್ಲಿ ಈವರೆಗೆ 158 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹಾಗಾಗಿ ಅವರಿಂದ ಪ್ಲಾಸ್ಮಾ ಪಡೆದು, ತೀವ್ರ ನಿಗಾ ಘಟಕದಲ್ಲಿರುವ ರೋಗಿಗಳಿಗೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ.