<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ ಅಂಗವಾಗಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಜಾಥಾ ನಡೆಸಿದರು.</p>.<p>ಪೂರ್ವ ವಲಯ ಹೆಬ್ಬಾಳ ವಿಭಾಗದ ಮುನಿರೆಡ್ಡಿ ಪಾಳ್ಯ ವ್ಯಾಪ್ತಿಯಲ್ಲಿ ಬುಧವಾರ ನಡೆದ ಜಾಥಾದಲ್ಲಿ ಮಾತನಾಡಿದ ಅವರು, ‘ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಟ್ಟೆ ಚೀಲ ಅಥವಾ ಕಾಗದದ ಚೀಲಗಳನ್ನು ಮಾತ್ರ ಬಳಸಲು ನಾಗರಿಕರು ಹಾಗೂ ವ್ಯಾಪಾರಿಗಳಲ್ಲಿ ಹೆಚ್ಚಾಗಿ ಅರಿವು ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬೀದಿ ಬದಿ ವ್ಯಾಪಾರಿಗಳು, ಅಂಗಡಿಯವರಿಗೆ ಯಾವ ರೀತಿಯ ಪ್ಲಾಸ್ಟಿಕ್ ನಿಷೇಧವಾಗಿದೆ, ಯಾವುದನ್ನು ಬಳಸಲು ಅನುಮತಿಯಿದೆ ಎಂಬುದರ ಬಗ್ಗೆ ಭಿತ್ತಿಪತ್ರಗಳನ್ನು ನೀಡಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.<br><br><strong>ಬಟ್ಟೆ ಚೀಲ ವಿತರಣೆ:</strong> ಜಾಗೃತಿ ಜಾಥಾ ಸಮಯದಲ್ಲಿ ಬೀದಿಬದಿ ವ್ಯಾಪಾರಿಗಳು ಹಾಗೂ ಅಂಗಡಿಗಳಿಗೆ ಭಿತ್ತಿಪತ್ರದ ಜೊತೆಗೆ ಬಟ್ಟೆ ಚೀಲಗಳನ್ನು ವಿತರಿಸಲಾಯಿತು. ಇನ್ನು ಮುಂದೆ ಇದೇ ರೀತಿಯ ಬಟ್ಟೆ ಚೀಲಗಳನ್ನು ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಬಾರದು ಎಂದು ತುಷಾರ್ ಗಿರಿನಾಥ್ ಮನವಿ ಮಾಡಿದರು.</p>.<p>ಎಳನೀರು ಮಾರಾಟ ಮಾಡುವವರಿಗೆ ಪೇಪರ್ ಸ್ಟ್ರಾ ವಿತರಣೆ ಮಾಡಿ, ಪ್ಲಾಸ್ಟಿಕ್ನಿಂದ ತಯಾರಿಸಿದ ಉತ್ಪನ್ನಗಳನ್ನು ಬಳಸದಂತೆ ಮನವಿ ಮಾಡಿದರು. ಮನೆಯಿಂದಲೇ ಕೈ ಚೀಲಗಳನ್ನು ತರಲು ಅಭ್ಯಾಸ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸ್ಥಳಿಯವಾಗಿ ಲಭ್ಯವಿರುವ ಬಟ್ಟೆ ಚೀಲಗಳನ್ನು ಖರೀದಿಸುವಂತೆ ಸಾರ್ವಜನಿಕರಲ್ಲಿ ಕೇಳಿಕೊಂಡರು.</p>.<p><strong>ಎಚ್ಚರಿಕೆ ನಂತರ ದಂಡ:</strong> ನಿಷೇಧಿತ ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದರೆ ಮೊದಲು ಎಚ್ಚರಿಕೆ ನೀಡುತ್ತೇವೆ. ಮತ್ತೆ ಪ್ಲಾಸ್ಟಿಕ್ ಬಳಸುವುದು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದರು.</p>.<p>ವಲಯ ಆಯುಕ್ತೆ ಆರ್. ಸ್ನೇಹಲ್, ವಲಯ ಜಂಟಿ ಆಯುಕ್ತೆ ಸರೋಜಾ, ಘನತ್ಯಾಜ್ಯ ವಿಭಾಗದ ಅಧೀಕ್ಷಕ ಎಂಜಿನಿಯರ್ ವಿಶ್ವನಾಥ್, ಆರೋಗ್ಯಾಧಿಕಾರಿಗಳು, ಮಾರ್ಷಲ್ಗಳು, ಸ್ಥಳೀಯ ಕ್ಷೇಮಾಭಿವೃದ್ದಿ ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನಾಚರಣೆ ಅಂಗವಾಗಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಜಾಥಾ ನಡೆಸಿದರು.</p>.<p>ಪೂರ್ವ ವಲಯ ಹೆಬ್ಬಾಳ ವಿಭಾಗದ ಮುನಿರೆಡ್ಡಿ ಪಾಳ್ಯ ವ್ಯಾಪ್ತಿಯಲ್ಲಿ ಬುಧವಾರ ನಡೆದ ಜಾಥಾದಲ್ಲಿ ಮಾತನಾಡಿದ ಅವರು, ‘ನಗರದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಬಟ್ಟೆ ಚೀಲ ಅಥವಾ ಕಾಗದದ ಚೀಲಗಳನ್ನು ಮಾತ್ರ ಬಳಸಲು ನಾಗರಿಕರು ಹಾಗೂ ವ್ಯಾಪಾರಿಗಳಲ್ಲಿ ಹೆಚ್ಚಾಗಿ ಅರಿವು ಮೂಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬೀದಿ ಬದಿ ವ್ಯಾಪಾರಿಗಳು, ಅಂಗಡಿಯವರಿಗೆ ಯಾವ ರೀತಿಯ ಪ್ಲಾಸ್ಟಿಕ್ ನಿಷೇಧವಾಗಿದೆ, ಯಾವುದನ್ನು ಬಳಸಲು ಅನುಮತಿಯಿದೆ ಎಂಬುದರ ಬಗ್ಗೆ ಭಿತ್ತಿಪತ್ರಗಳನ್ನು ನೀಡಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.<br><br><strong>ಬಟ್ಟೆ ಚೀಲ ವಿತರಣೆ:</strong> ಜಾಗೃತಿ ಜಾಥಾ ಸಮಯದಲ್ಲಿ ಬೀದಿಬದಿ ವ್ಯಾಪಾರಿಗಳು ಹಾಗೂ ಅಂಗಡಿಗಳಿಗೆ ಭಿತ್ತಿಪತ್ರದ ಜೊತೆಗೆ ಬಟ್ಟೆ ಚೀಲಗಳನ್ನು ವಿತರಿಸಲಾಯಿತು. ಇನ್ನು ಮುಂದೆ ಇದೇ ರೀತಿಯ ಬಟ್ಟೆ ಚೀಲಗಳನ್ನು ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಬಾರದು ಎಂದು ತುಷಾರ್ ಗಿರಿನಾಥ್ ಮನವಿ ಮಾಡಿದರು.</p>.<p>ಎಳನೀರು ಮಾರಾಟ ಮಾಡುವವರಿಗೆ ಪೇಪರ್ ಸ್ಟ್ರಾ ವಿತರಣೆ ಮಾಡಿ, ಪ್ಲಾಸ್ಟಿಕ್ನಿಂದ ತಯಾರಿಸಿದ ಉತ್ಪನ್ನಗಳನ್ನು ಬಳಸದಂತೆ ಮನವಿ ಮಾಡಿದರು. ಮನೆಯಿಂದಲೇ ಕೈ ಚೀಲಗಳನ್ನು ತರಲು ಅಭ್ಯಾಸ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಸ್ಥಳಿಯವಾಗಿ ಲಭ್ಯವಿರುವ ಬಟ್ಟೆ ಚೀಲಗಳನ್ನು ಖರೀದಿಸುವಂತೆ ಸಾರ್ವಜನಿಕರಲ್ಲಿ ಕೇಳಿಕೊಂಡರು.</p>.<p><strong>ಎಚ್ಚರಿಕೆ ನಂತರ ದಂಡ:</strong> ನಿಷೇಧಿತ ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದರೆ ಮೊದಲು ಎಚ್ಚರಿಕೆ ನೀಡುತ್ತೇವೆ. ಮತ್ತೆ ಪ್ಲಾಸ್ಟಿಕ್ ಬಳಸುವುದು ಕಂಡುಬಂದರೆ ದಂಡ ವಿಧಿಸಲಾಗುವುದು ಎಂದು ತುಷಾರ್ ಗಿರಿನಾಥ್ ಹೇಳಿದರು.</p>.<p>ವಲಯ ಆಯುಕ್ತೆ ಆರ್. ಸ್ನೇಹಲ್, ವಲಯ ಜಂಟಿ ಆಯುಕ್ತೆ ಸರೋಜಾ, ಘನತ್ಯಾಜ್ಯ ವಿಭಾಗದ ಅಧೀಕ್ಷಕ ಎಂಜಿನಿಯರ್ ವಿಶ್ವನಾಥ್, ಆರೋಗ್ಯಾಧಿಕಾರಿಗಳು, ಮಾರ್ಷಲ್ಗಳು, ಸ್ಥಳೀಯ ಕ್ಷೇಮಾಭಿವೃದ್ದಿ ಸಂಘದ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>