<p><strong>ಬೆಂಗಳೂರು</strong>:ಯಲಹಂಕ ವಲಯವನ್ನು ‘ಪ್ಲಾಸ್ಟಿಕ್ ಮುಕ್ತ’ ಮಾಡುವ ಭಾಗವಾಗಿ ಪಾಲಿಕೆಯ ಅಧಿಕಾರಿಗಳು ವಿವಿಧ ಅಂಗಡಿಗಳು ಹಾಗೂ ಮನೆಗಳ ಮೇಲೆ ಮಂಗಳವಾರ ದಾಳಿ ನಡೆಸಿ 800 ಕೆಜಿ ಪ್ಲಾಸ್ಟಿಕ್ ಜಪ್ತಿ ಮಾಡಿದರು. ಪ್ಲಾಸ್ಟಿಕ್ ಅಂಗಡಿ ಮಾಲೀಕರಿಗೆ ಮತ್ತು ಕಸವನ್ನು ಸರಿಯಾಗಿ ವಿಂಗಡಿಸದವರಿಗೆ ದಂಡ ವಿಧಿಸಲಾಯಿತು.</p>.<p>ಯಲಹಂಕ ವಲಯ ಜಂಟಿ ಆಯುಕ್ತ ಅಶೋಕ್ ನೇತೃತ್ವದಲ್ಲಿ ವಾರ್ಡ್ ಸಂಖ್ಯೆ 8ರ ಕೊಡಿಗೇಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಅಂಗಡಿಗಳಲ್ಲಿ ಇಟ್ಟಿದ್ದ 600 ಕೆಜಿ ಹಾಗೂ ಮನೆಯಲ್ಲಿ ಇರಿಸಲಾಗಿದ್ದ 200 ಕೆಜಿ ಪ್ಲಾಸ್ಟಿಕ್ ಅನ್ನು ಸಿಬ್ಬಂದಿ ವಶಕ್ಕೆ ಪಡೆದರು.</p>.<p>‘ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ಮಾರಾಟ ಮತ್ತು ಬಳಕೆ ನಿರಾತಂಕವಾಗಿ ಸಾಗಿದೆ. ಪ್ಲಾಸ್ಟಿಕ್ ಮಾರಾಟ ಮಾಡುವವರಿಗೆ ಮೊದಲು ₹25 ಸಾವಿರ ದಂಡ ವಿಧಿಸಲಾಗುತ್ತದೆ. ಮುಂದುವರಿದರೆ ಎರಡನೇ ಬಾರಿ ₹50 ಸಾವಿರ ದಂಡ ವಿಧಿಸಲು ಅವಕಾಶವಿದೆ. ಸದ್ಯ, ಕೊಡಿಗೇಹಳ್ಳಿಯ ಕೆಲವು ಅಂಗಡಿಗಳಲ್ಲಿನ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, ಅಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ವಾರ್ಡ್ ಸಂಖ್ಯೆ 26ರ ರಾಮಮೂರ್ತಿ ನಗರದಲ್ಲಿ ಕಸವನ್ನು ಸರಿಯಾಗಿ ವಿಂಗಡಿಸದವರಿಂದ ₹10 ಸಾವಿರ ದಂಡ ಸಂಗ್ರಹಿಸಲಾಗಿದೆ. ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡದ ಕೊಡಿಗೇಹಳ್ಳಿಯ ಮಾಂಸದಂಗಡಿಯವರಿಗೂ ದಂಡ ವಿಧಿಸಲಾಗಿದೆ.</p>.<p>ಬ್ಯಾಟರಾಯನಪುರ ವಿಭಾಗದಲ್ಲಿ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕಸ ವಿಂಗಡಣೆ ವ್ಯವಸ್ಥೆ ಸಾಕಷ್ಟು ಸುಧಾರಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ಯಲಹಂಕ ವಲಯವನ್ನು ‘ಪ್ಲಾಸ್ಟಿಕ್ ಮುಕ್ತ’ ಮಾಡುವ ಭಾಗವಾಗಿ ಪಾಲಿಕೆಯ ಅಧಿಕಾರಿಗಳು ವಿವಿಧ ಅಂಗಡಿಗಳು ಹಾಗೂ ಮನೆಗಳ ಮೇಲೆ ಮಂಗಳವಾರ ದಾಳಿ ನಡೆಸಿ 800 ಕೆಜಿ ಪ್ಲಾಸ್ಟಿಕ್ ಜಪ್ತಿ ಮಾಡಿದರು. ಪ್ಲಾಸ್ಟಿಕ್ ಅಂಗಡಿ ಮಾಲೀಕರಿಗೆ ಮತ್ತು ಕಸವನ್ನು ಸರಿಯಾಗಿ ವಿಂಗಡಿಸದವರಿಗೆ ದಂಡ ವಿಧಿಸಲಾಯಿತು.</p>.<p>ಯಲಹಂಕ ವಲಯ ಜಂಟಿ ಆಯುಕ್ತ ಅಶೋಕ್ ನೇತೃತ್ವದಲ್ಲಿ ವಾರ್ಡ್ ಸಂಖ್ಯೆ 8ರ ಕೊಡಿಗೇಹಳ್ಳಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಅಂಗಡಿಗಳಲ್ಲಿ ಇಟ್ಟಿದ್ದ 600 ಕೆಜಿ ಹಾಗೂ ಮನೆಯಲ್ಲಿ ಇರಿಸಲಾಗಿದ್ದ 200 ಕೆಜಿ ಪ್ಲಾಸ್ಟಿಕ್ ಅನ್ನು ಸಿಬ್ಬಂದಿ ವಶಕ್ಕೆ ಪಡೆದರು.</p>.<p>‘ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ, ಮಾರಾಟ ಮತ್ತು ಬಳಕೆ ನಿರಾತಂಕವಾಗಿ ಸಾಗಿದೆ. ಪ್ಲಾಸ್ಟಿಕ್ ಮಾರಾಟ ಮಾಡುವವರಿಗೆ ಮೊದಲು ₹25 ಸಾವಿರ ದಂಡ ವಿಧಿಸಲಾಗುತ್ತದೆ. ಮುಂದುವರಿದರೆ ಎರಡನೇ ಬಾರಿ ₹50 ಸಾವಿರ ದಂಡ ವಿಧಿಸಲು ಅವಕಾಶವಿದೆ. ಸದ್ಯ, ಕೊಡಿಗೇಹಳ್ಳಿಯ ಕೆಲವು ಅಂಗಡಿಗಳಲ್ಲಿನ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, ಅಂಗಡಿಗಳಿಗೆ ಬೀಗಮುದ್ರೆ ಹಾಕಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ವಾರ್ಡ್ ಸಂಖ್ಯೆ 26ರ ರಾಮಮೂರ್ತಿ ನಗರದಲ್ಲಿ ಕಸವನ್ನು ಸರಿಯಾಗಿ ವಿಂಗಡಿಸದವರಿಂದ ₹10 ಸಾವಿರ ದಂಡ ಸಂಗ್ರಹಿಸಲಾಗಿದೆ. ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡದ ಕೊಡಿಗೇಹಳ್ಳಿಯ ಮಾಂಸದಂಗಡಿಯವರಿಗೂ ದಂಡ ವಿಧಿಸಲಾಗಿದೆ.</p>.<p>ಬ್ಯಾಟರಾಯನಪುರ ವಿಭಾಗದಲ್ಲಿ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಕಸ ವಿಂಗಡಣೆ ವ್ಯವಸ್ಥೆ ಸಾಕಷ್ಟು ಸುಧಾರಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>