ಸ್ವಾತಂತ್ರ್ಯ ಪೂರ್ವದ ನಾಲ್ವಡಿ ಕೃಷ್ಣರಾಜ ಒಡೆಯರ್ ನೇಮಿಸಿದ ‘ಮಿಲ್ಲರ್ ಆಯೋಗ’ದಿಂದ ಹಿಡಿದು ಸ್ವಾತಂತ್ರ್ಯಾನಂತರದ ಚಿನ್ನಪ್ಪರೆಡ್ಡಿ ಆಯೋಗ, ವೆಂಕಟಸ್ವಾಮಿ ಆಯೋಗದ ಆದಿಯಾಗಿ ಇಂದಿನ ಎಲ್ಲ ಆಯೋಗಗಳು ಮುಸ್ಲಿಮರನ್ನು ಹಿಂದುಳಿದ ವರ್ಗಗಳು ಎಂದೇ ಕರ್ನಾಟಕದಲ್ಲಿ ಗುರುತಿಸಿವೆ. ಮುಸ್ಲಿಮರನ್ನೆಂದೂ ಧಾರ್ಮಿಕ ಅಲ್ಪಸಂಖ್ಯಾತರು ಎಂದು ಗುರುತಿಸಿಲ್ಲ, ಅಂತೆಯೇ ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಕೂಡ ಹಿಂದುಳಿದ ವರ್ಗಗಳ ಪಟ್ಟಿಯಲ್ಲೇ ಇದ್ದಾರೆ ಎಂದು ತಿಳಿಸಿದ್ದಾರೆ.