‘ದೂರದ ದೇಶದಿಂದ ನೇರ ಇಲ್ಲಿಗೆ ಬಂದೆ. ಭಾರತದ ಸೂರ್ಯೋದಯವಾಗುತ್ತಿರುವ ಈ ಹೊತ್ತಿನಲ್ಲಿ ಬೆಂಗಳೂರಿಗೆ ಬಂದಿರುವೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ಬಹಳ ಸಂತಸವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.
ಮೋದಿ ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಿಗ್ಗೆ 4:30 ರಿಂದ ಬೆಳಿಗ್ಗೆ 9:30ರ ವರೆಗೆ ಕೆಲ ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜೊತೆಗೆ, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸಂಚಾರ ಪೋಲಿಸರು ತಿಳಿಸಿದ್ದಾರೆ.