<p><strong>ಬೆಂಗಳೂರು</strong>: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ. ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.</p><p>ನಾಲ್ವರು ಜಂಟಿ ಪೊಲೀಸ್ ಕಮಿಷನರ್, 10 ಡಿಸಿಪಿಗಳು, 50 ಎಸಿಪಿಗಳು ಹಾಗೂ 200ಕ್ಕೂ ಹೆಚ್ಚು ಇನ್ಸ್ಪೆಕ್ಟರ್ಗಳು, 650ಕ್ಕೂ ಹೆಚ್ಚು ಪಿಎಸ್ಐಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನೂ ಅಲ್ಲಲ್ಲಿ ನಿಯೋಜಿಸಲಾಗಿದೆ. </p><p>50 ಚೆಕ್ಪೋಸ್ಟ್ ಸ್ಥಾಪನೆ: ಜಯನಗರ ಮತ್ತು ಜೆಪಿ ನಗರದ ಬಳಿ 50 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ರಾಗಿಗುಡ್ಡ ಮೆಟ್ರೊ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ.</p><p>ನಗರ ಪೊಲೀಸ್ ಕಮಿಷನರ್ ಹಾಗೂ ಹಿರಿಯ ಅಧಿಕಾರಿಗಳು ರಾಗಿಗುಡ್ಡ ಮೆಟ್ರೊ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.</p><p>ಸ್ಥಳದಲ್ಲಿ ಪೊಲೀಸ್ ವಾಹನಗಳು, ಆಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ದಳದ ವಾಹನಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೊ ನಿಲ್ದಾಣ ಸುತ್ತಮುತ್ತ ಇರಿಸಲಾಗಿದೆ.</p><p>34 ನಾಕಾಬಂದಿ ರಚನೆ: ನಗರದ 34 ಕಡೆ ನಾಕಾಬಂದಿ ಸ್ಥಾಪಿಸಿ ಅನುಮಾನ ಬಂದ ವ್ಯಕ್ತಿಗಳು ಮತ್ತು ವಾಹನ ಸವಾರರನ್ನು ತಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಪೂರ್ವ ವಿಭಾಗದ ಡಿಸಿಪಿ ವಲಯದಲ್ಲಿ 6, ಕೇಂದ್ರ ವಿಭಾಗದಲ್ಲಿ 6, ಪಶ್ಚಿಮ ವಿಭಾಗದಲ್ಲಿ 10 ಮತ್ತು ಉತ್ತರ ವಿಭಾಗದಲ್ಲಿ 10 ನಾಕಾಬಂದಿ ನ್ನು ಸ್ಥಾಪನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಗರಕ್ಕೆ ಭೇಟಿ ನೀಡುತ್ತಿದ್ದು, ಭದ್ರತೆಗಾಗಿ 10 ಸಾವಿರ ಪೊಲೀಸರನ್ನು ಬಳಸಿಕೊಳ್ಳಲಾಗುತ್ತಿದೆ. ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.</p><p>ನಾಲ್ವರು ಜಂಟಿ ಪೊಲೀಸ್ ಕಮಿಷನರ್, 10 ಡಿಸಿಪಿಗಳು, 50 ಎಸಿಪಿಗಳು ಹಾಗೂ 200ಕ್ಕೂ ಹೆಚ್ಚು ಇನ್ಸ್ಪೆಕ್ಟರ್ಗಳು, 650ಕ್ಕೂ ಹೆಚ್ಚು ಪಿಎಸ್ಐಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p><p>ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನೂ ಅಲ್ಲಲ್ಲಿ ನಿಯೋಜಿಸಲಾಗಿದೆ. </p><p>50 ಚೆಕ್ಪೋಸ್ಟ್ ಸ್ಥಾಪನೆ: ಜಯನಗರ ಮತ್ತು ಜೆಪಿ ನಗರದ ಬಳಿ 50 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ರಾಗಿಗುಡ್ಡ ಮೆಟ್ರೊ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ.</p><p>ನಗರ ಪೊಲೀಸ್ ಕಮಿಷನರ್ ಹಾಗೂ ಹಿರಿಯ ಅಧಿಕಾರಿಗಳು ರಾಗಿಗುಡ್ಡ ಮೆಟ್ರೊ ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.</p><p>ಸ್ಥಳದಲ್ಲಿ ಪೊಲೀಸ್ ವಾಹನಗಳು, ಆಂಬ್ಯುಲೆನ್ಸ್ಗಳು ಮತ್ತು ಅಗ್ನಿಶಾಮಕ ದಳದ ವಾಹನಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಮೆಟ್ರೊ ನಿಲ್ದಾಣ ಸುತ್ತಮುತ್ತ ಇರಿಸಲಾಗಿದೆ.</p><p>34 ನಾಕಾಬಂದಿ ರಚನೆ: ನಗರದ 34 ಕಡೆ ನಾಕಾಬಂದಿ ಸ್ಥಾಪಿಸಿ ಅನುಮಾನ ಬಂದ ವ್ಯಕ್ತಿಗಳು ಮತ್ತು ವಾಹನ ಸವಾರರನ್ನು ತಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಪೂರ್ವ ವಿಭಾಗದ ಡಿಸಿಪಿ ವಲಯದಲ್ಲಿ 6, ಕೇಂದ್ರ ವಿಭಾಗದಲ್ಲಿ 6, ಪಶ್ಚಿಮ ವಿಭಾಗದಲ್ಲಿ 10 ಮತ್ತು ಉತ್ತರ ವಿಭಾಗದಲ್ಲಿ 10 ನಾಕಾಬಂದಿ ನ್ನು ಸ್ಥಾಪನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>