ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕೃತವಾಗಿ ಸಿದ್ಧಪಡಿಸಿದ ದಾಖಲೆಯಲ್ಲಿ ಉಲ್ಲೇಖಿಸಿರುವಂತೆ, ಹಲವಾರು ನಿವೇದನೆಗಳು, ಮುಖ್ಯಮಂತ್ರಿ ಮತ್ತಿತರ ಸಚಿವರು, ರಾಜ್ಯದ ತುರ್ತುಪರಿಸ್ಥಿತಿಗೆ ಕೇಂದ್ರದ ತುರ್ತು ಅನುದಾನ ನೀಡುವಂತೆ ಪ್ರಧಾನಿ ಮತ್ತು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದರು. ಯಾರೊಬ್ಬರೂ ಸ್ಪಂದಿಸಲಿಲ್ಲ. ಅನಿವಾರ್ಯವಾಗಿ ರಾಜ್ಯಸರ್ಕಾರ ಸುಪ್ರೀಂ ಕೋರ್ಟಿನ ಬಾಗಿಲು ತಟ್ಟಬೇಕಾಯಿತು. ನ್ಯಾಯಾಲಯದ ಆದೇಶದಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ₹ 3,454 ಕೋಟಿ ಬಿಡುಗಡೆ ಮಾಡಿದೆ. ₹ 18,170 ಕೋಟಿ ಬಿಡುಗಡೆ ಮಾಡುವ ಬದಲು ಕಡಿಮೆ ಬಿಡುಗಡೆ ಮಾಡಿದೆ ಎಂದು ದೂರಿದ್ದಾರೆ.