<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ಕೊರತೆ ಇದೆ. ಆ ಕಾರಣದಿಂದಾಗಿಯೇ ಅವರು ಯೋಜನೆಯನ್ನು ಟೀಕಿಸಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಶಕ್ತಿ ಯೋಜನೆಯಿಂದ ವಾಯುಮಾಲಿನ್ಯ ಹೆಚ್ಚುತ್ತಿದೆ ಮತ್ತು ನಮ್ಮ ಮೆಟ್ರೊಗೆ ನಷ್ಟವಾಗಿದೆ ಎಂಬ ಪ್ರಧಾನಿಯವರ ಟೀಕೆಯನ್ನು ನೋಡಿ ನನಗೆ ಆಘಾತವಾಯಿತು’ ಎಂದರು.</p>.<p>‘ನಮ್ಮ ಮೆಟ್ರೊ ಒಂದು ವರ್ಷದಲ್ಲಿ ₹ 130 ಕೋಟಿ ಲಾಭ ಗಳಿಸಿದೆ. ನಮ್ಮ ಮೆಟ್ರೊ ಬೆಂಗಳೂರು ನಗರಕ್ಕೆ ಸೀಮಿತ. ಆದರೆ, ಶಕ್ತಿ ಯೋಜನೆ ರಾಜ್ಯದಾದ್ಯಂತ ಜಾರಿಯಲ್ಲಿದೆ. ನಿತ್ಯ 60 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ’ ಎಂದರು.</p>.<p>‘ದೇಶದ ಹಲವು ರಾಜ್ಯಗಳು ಶಕ್ತಿ ಯೋಜನೆಯ ಕುರಿತು ಆಸಕ್ತಿ ತೋರಿವೆ. ಅಲ್ಲಿನ ಅಧಿಕಾರಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದಿವೆ. ಮೆಟ್ರೊ ರೈಲು ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಅನುಷ್ಠಾನಕ್ಕೆ ಬಂದಿರುವುದು. ಈ ಕುರಿತು ಪ್ರಧಾನಿಯವರಿಗೆ ಯಾರೂ ಸರಿಯಾದ ಮಾಹಿತಿ ನೀಡಿದಂತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ಕೊರತೆ ಇದೆ. ಆ ಕಾರಣದಿಂದಾಗಿಯೇ ಅವರು ಯೋಜನೆಯನ್ನು ಟೀಕಿಸಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಶಕ್ತಿ ಯೋಜನೆಯಿಂದ ವಾಯುಮಾಲಿನ್ಯ ಹೆಚ್ಚುತ್ತಿದೆ ಮತ್ತು ನಮ್ಮ ಮೆಟ್ರೊಗೆ ನಷ್ಟವಾಗಿದೆ ಎಂಬ ಪ್ರಧಾನಿಯವರ ಟೀಕೆಯನ್ನು ನೋಡಿ ನನಗೆ ಆಘಾತವಾಯಿತು’ ಎಂದರು.</p>.<p>‘ನಮ್ಮ ಮೆಟ್ರೊ ಒಂದು ವರ್ಷದಲ್ಲಿ ₹ 130 ಕೋಟಿ ಲಾಭ ಗಳಿಸಿದೆ. ನಮ್ಮ ಮೆಟ್ರೊ ಬೆಂಗಳೂರು ನಗರಕ್ಕೆ ಸೀಮಿತ. ಆದರೆ, ಶಕ್ತಿ ಯೋಜನೆ ರಾಜ್ಯದಾದ್ಯಂತ ಜಾರಿಯಲ್ಲಿದೆ. ನಿತ್ಯ 60 ಲಕ್ಷ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ’ ಎಂದರು.</p>.<p>‘ದೇಶದ ಹಲವು ರಾಜ್ಯಗಳು ಶಕ್ತಿ ಯೋಜನೆಯ ಕುರಿತು ಆಸಕ್ತಿ ತೋರಿವೆ. ಅಲ್ಲಿನ ಅಧಿಕಾರಿಗಳು ರಾಜ್ಯ ಸರ್ಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದಿವೆ. ಮೆಟ್ರೊ ರೈಲು ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಅನುಷ್ಠಾನಕ್ಕೆ ಬಂದಿರುವುದು. ಈ ಕುರಿತು ಪ್ರಧಾನಿಯವರಿಗೆ ಯಾರೂ ಸರಿಯಾದ ಮಾಹಿತಿ ನೀಡಿದಂತಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>