ತುಮಕೂರಿನಿಂದ ನಗರಕ್ಕೆ ಬಂದು ಡಿಆರ್ಡಿಒ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಜಭವನದಲ್ಲಿ ವಾಸ್ತವ್ಯ ಹೂಡಲು ಪ್ರಧಾನಿಯವರ ವೇಳಾಪಟ್ಟಿ ಸಿದ್ಧಪಡಿಸಲಾಗಿತ್ತು. ಅವರ ವಾಹನ ಸಂಚರಿಸುವ ರಸ್ತೆಗಳೆಲ್ಲೆಲ್ಲ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಜೊತೆಗೆ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳುವಂತೆ ಭದ್ರತಾ ಸಿಬ್ಬಂದಿ, ನಗರದ ಅಧಿಕಾರಿಗಳಿಗೆ ಸೂಚಿಸಿದ್ದರು.