<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಪ್ರಧಾನ ಮಂತ್ರಿ ಸ್ವ-ನಿಧಿ’ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ಬ್ಯಾಂಕ್ಗಳ ಮೂಲಕ ₹ 10 ಸಾವಿರದವರೆಗೆ ಕಿರು ಸಾಲ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದುಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಸೂಚನೆ ನೀಡಿದರು.</p>.<p>ಪ್ರಧಾನಮಂತ್ರಿಯವರ ಆತ್ಮನಿರ್ಭರ್ ಘೋಷವಾಕ್ಯದಂತೆ ಬೀದಿ ವ್ಯಾಪಾರಿಗಳು ಸ್ವಾವಲಂಬಿ ಬದುಕು ಕಟ್ಟಲು ನೆರವಾಗುವ ಯೋಜನೆಯ ಪ್ರಗತಿಯನ್ನು ಆಯುಕ್ತರು ಬುಧವಾರ ಪರಿಶೀಲಿಸಿದರು.</p>.<p>ಪಾಲಿಕೆಯ ಎಲ್ಲ ವಾರ್ಡ್ಗಳ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಕಾರ್ಯ ನಡೆಸಬೇಕು. ಸಮೀಕ್ಷೆಯಲ್ಲಿ ಗುರುತಿಸಿರುವ ಎಲ್ಲ ಬೀದಿ ವ್ಯಾಪಾರಿಗಳಿಗೆ ಕಿರು ಸಾಲ ಪಡೆಯುವ ಅರ್ಜಿಗಳನ್ನು ನೀಡಿ, ಅದನ್ನು ಭರ್ತಿ ಮಾಡಲು ನೆರವಾಗಬೇಕು. ಅರ್ಜಿಗಳನ್ನು ಪಿಎಂ ಸ್ವ-ನಿಧಿ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿ ಬ್ಯಾಂಕ್ಗಳಿಂದ ತ್ವರಿತವಾಗಿ ಕಿರು ಸಾಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ಈ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ತ್ವರಿತವಾಗಿ ಸಾಲ ನೀಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೂ ಆಯುಕ್ತರು ಸೂಚಿಸಿದರು.</p>.<p>ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ, ಪೊಲೀಸ್ ಸಿಬ್ಬಂದಿ, ವಿವಿಧ ಬ್ಯಾಂಕ್ಗಳ ಅಧಿಕಾರಿಗಳು, ಎಲ್ಲ ವಲಯಗಳ ಜಂಟಿ ಆಯುಕ್ತರು ಉಪಸ್ಥಿತರಿದ್ದರು.</p>.<p>ಅಂಕಿ ಅಂಶ</p>.<p>85,400</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಒದಗಿಸಲು ನಿಗದಿಪಡಿಸಿದ ಗುರಿ</p>.<p>64,147</p>.<p>ಇದುವರೆಗೆ ವಿತರಿಸಿರುವ ಅರ್ಜಿಗಳು</p>.<p>39,512</p>.<p>ಅರ್ಜಿಗಳನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ</p>.<p class="Briefhead"><strong>ಮಕ್ಕಳ ಭಿಕ್ಷಾಟನೆ ಸಮೀಕ್ಷೆ: ತರಬೇತಿ ಇಂದು</strong></p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ಬದಿಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮತ್ತು ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಮಕ್ಕಳನ್ನು ನಿಖರವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸುವ ತಂಡಕ್ಕೆ ಇದೇ 25ರಂದು (ಗುರುವಾರ) ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ಯಾವ ಕಾರಣಕ್ಕಾಗಿ ಭಿಕ್ಷಾಟನೆ ಅಥವಾ ವ್ಯಾಪಾರದಲ್ಲಿ ತೊಡಗಿದ್ದಾರೆ, ಅವರ ಬಳಿ ನಯವಾಗಿ ಮಾತನಾಡಿ ಮಾಹಿತಿ ಪಡೆಯುವ ಬಗೆ ಹೇಗೆ ಎಂಬ ಕುರಿತು ತಜ್ಞರು ತರಬೇತಿ ನೀಡಲಿದ್ದಾರೆ.</p>.<p>ನಗರದ ಬೀದಿಗಳಲ್ಲಿ ಹಾಗೂ ಸಂಚಾರ ಸಿಗ್ನಲ್ಗಳಲ್ಲಿ ಭಿಕ್ಷಾಟನೆ ಹಾಗೂ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುವ 886 ಮಕ್ಕಳನ್ನು ಗುರುತಿಸಲಾಗಿದೆ. ಚಿಣ್ಣರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯದಲ್ಲಿ ತೊಡಗಿರುವ ತಾಣಗಳನ್ನೂ (ಹಾಟ್ ಸ್ಪಾಟ್) ಪಟ್ಟಿಮಾಡಲಾಗಿದೆ. ಸಮೀಕ್ಷಾ ಕಾರ್ಯಕರ್ತರು ಇಂತಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.</p>.<p>‘ಮಾಹಿತಿ ಸಂಗ್ರಹಿಸುವ ತಂಡಗಳ ಸಮೀಕ್ಷೆ ಕಾರ್ಯಕ್ಕೆ ವಾಹನಗಳನ್ನು ಒದಗಿಸಬೇಕು. ಇಂತಹ ಕಾರ್ಯಕರ್ತರಿಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಬೇಕು’ ಎಂದು ಬಿಬಿಎಂಪಿ ಆಯುಕ್ತರು ಎಲ್ಲ ವಲಯಗಳ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು.</p>.<p>ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ವ್ಯಾಪ್ತಿಯಲ್ಲಿ ‘ಪ್ರಧಾನ ಮಂತ್ರಿ ಸ್ವ-ನಿಧಿ’ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ಬ್ಯಾಂಕ್ಗಳ ಮೂಲಕ ₹ 10 ಸಾವಿರದವರೆಗೆ ಕಿರು ಸಾಲ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದುಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಸೂಚನೆ ನೀಡಿದರು.</p>.<p>ಪ್ರಧಾನಮಂತ್ರಿಯವರ ಆತ್ಮನಿರ್ಭರ್ ಘೋಷವಾಕ್ಯದಂತೆ ಬೀದಿ ವ್ಯಾಪಾರಿಗಳು ಸ್ವಾವಲಂಬಿ ಬದುಕು ಕಟ್ಟಲು ನೆರವಾಗುವ ಯೋಜನೆಯ ಪ್ರಗತಿಯನ್ನು ಆಯುಕ್ತರು ಬುಧವಾರ ಪರಿಶೀಲಿಸಿದರು.</p>.<p>ಪಾಲಿಕೆಯ ಎಲ್ಲ ವಾರ್ಡ್ಗಳ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಕಾರ್ಯ ನಡೆಸಬೇಕು. ಸಮೀಕ್ಷೆಯಲ್ಲಿ ಗುರುತಿಸಿರುವ ಎಲ್ಲ ಬೀದಿ ವ್ಯಾಪಾರಿಗಳಿಗೆ ಕಿರು ಸಾಲ ಪಡೆಯುವ ಅರ್ಜಿಗಳನ್ನು ನೀಡಿ, ಅದನ್ನು ಭರ್ತಿ ಮಾಡಲು ನೆರವಾಗಬೇಕು. ಅರ್ಜಿಗಳನ್ನು ಪಿಎಂ ಸ್ವ-ನಿಧಿ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿ ಬ್ಯಾಂಕ್ಗಳಿಂದ ತ್ವರಿತವಾಗಿ ಕಿರು ಸಾಲ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>.<p>ಈ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ತ್ವರಿತವಾಗಿ ಸಾಲ ನೀಡಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೂ ಆಯುಕ್ತರು ಸೂಚಿಸಿದರು.</p>.<p>ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ ಶೆಟ್ಟಿ, ಪೊಲೀಸ್ ಸಿಬ್ಬಂದಿ, ವಿವಿಧ ಬ್ಯಾಂಕ್ಗಳ ಅಧಿಕಾರಿಗಳು, ಎಲ್ಲ ವಲಯಗಳ ಜಂಟಿ ಆಯುಕ್ತರು ಉಪಸ್ಥಿತರಿದ್ದರು.</p>.<p>ಅಂಕಿ ಅಂಶ</p>.<p>85,400</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಪಿಎಂ ಸ್ವನಿಧಿ ಯೋಜನೆ ಅಡಿ ಸಾಲ ಒದಗಿಸಲು ನಿಗದಿಪಡಿಸಿದ ಗುರಿ</p>.<p>64,147</p>.<p>ಇದುವರೆಗೆ ವಿತರಿಸಿರುವ ಅರ್ಜಿಗಳು</p>.<p>39,512</p>.<p>ಅರ್ಜಿಗಳನ್ನು ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ</p>.<p class="Briefhead"><strong>ಮಕ್ಕಳ ಭಿಕ್ಷಾಟನೆ ಸಮೀಕ್ಷೆ: ತರಬೇತಿ ಇಂದು</strong></p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ಬದಿಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮತ್ತು ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಮಕ್ಕಳನ್ನು ನಿಖರವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸುವ ತಂಡಕ್ಕೆ ಇದೇ 25ರಂದು (ಗುರುವಾರ) ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ಯಾವ ಕಾರಣಕ್ಕಾಗಿ ಭಿಕ್ಷಾಟನೆ ಅಥವಾ ವ್ಯಾಪಾರದಲ್ಲಿ ತೊಡಗಿದ್ದಾರೆ, ಅವರ ಬಳಿ ನಯವಾಗಿ ಮಾತನಾಡಿ ಮಾಹಿತಿ ಪಡೆಯುವ ಬಗೆ ಹೇಗೆ ಎಂಬ ಕುರಿತು ತಜ್ಞರು ತರಬೇತಿ ನೀಡಲಿದ್ದಾರೆ.</p>.<p>ನಗರದ ಬೀದಿಗಳಲ್ಲಿ ಹಾಗೂ ಸಂಚಾರ ಸಿಗ್ನಲ್ಗಳಲ್ಲಿ ಭಿಕ್ಷಾಟನೆ ಹಾಗೂ ಸಣ್ಣಪುಟ್ಟ ವಸ್ತುಗಳನ್ನು ಮಾರಾಟ ಮಾಡುವ 886 ಮಕ್ಕಳನ್ನು ಗುರುತಿಸಲಾಗಿದೆ. ಚಿಣ್ಣರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯದಲ್ಲಿ ತೊಡಗಿರುವ ತಾಣಗಳನ್ನೂ (ಹಾಟ್ ಸ್ಪಾಟ್) ಪಟ್ಟಿಮಾಡಲಾಗಿದೆ. ಸಮೀಕ್ಷಾ ಕಾರ್ಯಕರ್ತರು ಇಂತಹ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.</p>.<p>‘ಮಾಹಿತಿ ಸಂಗ್ರಹಿಸುವ ತಂಡಗಳ ಸಮೀಕ್ಷೆ ಕಾರ್ಯಕ್ಕೆ ವಾಹನಗಳನ್ನು ಒದಗಿಸಬೇಕು. ಇಂತಹ ಕಾರ್ಯಕರ್ತರಿಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಬೇಕು’ ಎಂದು ಬಿಬಿಎಂಪಿ ಆಯುಕ್ತರು ಎಲ್ಲ ವಲಯಗಳ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು.</p>.<p>ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>