<p><strong>ಕೆಂಗೇರಿ:</strong> ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಛಾಪು ಮೂಡಿಸಿದ್ದ ಎಚ್.ಎಸ್.ವೆಂಕಟೇಶಮೂರ್ತಿ ಅವರು, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಸಹೃದಯಿಯಾಗಿದ್ದರು ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಸ್ಮರಿಸಿದರು.</p>.<p>ಯಶವಂತಪುರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಲ್ಲಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಎಚ್.ಎಸ್.ವೆಂಕಟೇಶಮೂರ್ತಿ ನುಡಿ ನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಗ್ರಾಮೀಣ ಹಿನ್ನೆಲೆಯಿಂದ ಬಂದ ಎಚ್ಎಸ್ವಿ, ಸಾಹಿತ್ಯ ಲೋಕದಲ್ಲಿ ತಮ್ಮ ಅಗಾಧ ಪ್ರತಿಭೆ ಹಾಗೂ ಪರಿಶ್ರಮದಿಂದ ಯಾವುದೇ ಬೆಂಬಲವಿಲ್ಲದೆ ಬೆಳೆದು ಬಂದರು ಎಂದು ಶ್ಲಾಘಿಸಿದರು.</p>.<p>ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ ಮಾತನಾಡಿ, ‘ಸಹಕಾರ ಮನೋಭಾವ ಹೊಂದಿದ್ದ ಎಚ್ಎಸ್ವಿ, ಕಲಾವಿದನ ಸೃಜನಶೀಲತೆಗೂ ಮನ್ನಣೆ ನೀಡಿ ಬದಲಾವಣೆಗೆ ಮುಕ್ತ ಅವಕಾಶ ನೀಡುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪ್ರಕಾಶ್ ಮೂರ್ತಿ ಮಾತನಾಡಿ, ‘ಪುತಿನ ಕುರಿತ ನಾಟಕ ವೆಂಕಟೇಶಮೂರ್ತಿ ಅವರ ಕೊನೆಯ ಸಾಹಿತ್ಯಿಕ ಕೃಷಿಯಾಗಿದೆ. ಕೆಲ ಕಾರಣಂತರಗಳಿಂದ ನಾಟಕ ಮುದ್ರಣಕ್ಕೆ ಹಿನ್ನಡೆಯಾಗಿದೆ. ಎಲ್ಲ ಆರ್ಥಿಕ ವೆಚ್ಚಗಳನ್ನು ಭರಿಸಿ ಈ ನಾಟಕವನ್ನು ಮುದ್ರಿಸಿ ಲೋಕಾರ್ಪಣೆ ಮಾಡಲು ಸಾಹಿತ್ಯ ಪರಿಷತ್ತು ಸಿದ್ದವಿದೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಯಶವಂತಪುರ ಕ್ಷೇತ್ರ ಘಟಕದ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್ ಮಾತನಾಡಿದರು. ಗಾಯಕಿ ಸಂಗೀತಾ ಕಟ್ಟಿ ಎಚ್.ಎಸ್.ವಿ ವಿರಚಿತ ಹಾಡುಗಳನ್ನು ಸಾದರಪಡಿಸಿದರು. ಮುಖಂಡರಾದ ವಿ.ವಿ ಸತ್ಯನಾರಾಯಣ, ಶಿವಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಛಾಪು ಮೂಡಿಸಿದ್ದ ಎಚ್.ಎಸ್.ವೆಂಕಟೇಶಮೂರ್ತಿ ಅವರು, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಸಹೃದಯಿಯಾಗಿದ್ದರು ಎಂದು ಕವಿ ಬಿ.ಆರ್.ಲಕ್ಷ್ಮಣರಾವ್ ಸ್ಮರಿಸಿದರು.</p>.<p>ಯಶವಂತಪುರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಇಲ್ಲಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಎಚ್.ಎಸ್.ವೆಂಕಟೇಶಮೂರ್ತಿ ನುಡಿ ನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಗ್ರಾಮೀಣ ಹಿನ್ನೆಲೆಯಿಂದ ಬಂದ ಎಚ್ಎಸ್ವಿ, ಸಾಹಿತ್ಯ ಲೋಕದಲ್ಲಿ ತಮ್ಮ ಅಗಾಧ ಪ್ರತಿಭೆ ಹಾಗೂ ಪರಿಶ್ರಮದಿಂದ ಯಾವುದೇ ಬೆಂಬಲವಿಲ್ಲದೆ ಬೆಳೆದು ಬಂದರು ಎಂದು ಶ್ಲಾಘಿಸಿದರು.</p>.<p>ರಂಗಕರ್ಮಿ ಶ್ರೀನಿವಾಸ್ ಜಿ ಕಪ್ಪಣ್ಣ ಮಾತನಾಡಿ, ‘ಸಹಕಾರ ಮನೋಭಾವ ಹೊಂದಿದ್ದ ಎಚ್ಎಸ್ವಿ, ಕಲಾವಿದನ ಸೃಜನಶೀಲತೆಗೂ ಮನ್ನಣೆ ನೀಡಿ ಬದಲಾವಣೆಗೆ ಮುಕ್ತ ಅವಕಾಶ ನೀಡುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪ್ರಕಾಶ್ ಮೂರ್ತಿ ಮಾತನಾಡಿ, ‘ಪುತಿನ ಕುರಿತ ನಾಟಕ ವೆಂಕಟೇಶಮೂರ್ತಿ ಅವರ ಕೊನೆಯ ಸಾಹಿತ್ಯಿಕ ಕೃಷಿಯಾಗಿದೆ. ಕೆಲ ಕಾರಣಂತರಗಳಿಂದ ನಾಟಕ ಮುದ್ರಣಕ್ಕೆ ಹಿನ್ನಡೆಯಾಗಿದೆ. ಎಲ್ಲ ಆರ್ಥಿಕ ವೆಚ್ಚಗಳನ್ನು ಭರಿಸಿ ಈ ನಾಟಕವನ್ನು ಮುದ್ರಿಸಿ ಲೋಕಾರ್ಪಣೆ ಮಾಡಲು ಸಾಹಿತ್ಯ ಪರಿಷತ್ತು ಸಿದ್ದವಿದೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಯಶವಂತಪುರ ಕ್ಷೇತ್ರ ಘಟಕದ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್ ಮಾತನಾಡಿದರು. ಗಾಯಕಿ ಸಂಗೀತಾ ಕಟ್ಟಿ ಎಚ್.ಎಸ್.ವಿ ವಿರಚಿತ ಹಾಡುಗಳನ್ನು ಸಾದರಪಡಿಸಿದರು. ಮುಖಂಡರಾದ ವಿ.ವಿ ಸತ್ಯನಾರಾಯಣ, ಶಿವಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>