‘ಉಸಿರಾಟಕ್ಕೆ ತೊಂದರೆಯಾಗಿ ಕೆಲಸಗಾರರು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಹತ್ತಿರದ ಸಾಯಿಕೃಪಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಆಸ್ಪತ್ರೆ, ಕೊಲಂಬಿಯಾ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವರು ಚಿಕಿತ್ಸೆ ಪಡೆದು ಮನೆಗೆ ಹೋಗಿದ್ದಾರೆ. ನಾನೂ ಅಸ್ವಸ್ಥಗೊಂಡಿದ್ದೆ’ ಎಂದು ಅವರು ತಿಳಿಸಿದ್ದಾರೆ.