<p><strong>ಬೆಂಗಳೂರು:</strong> ಕಳವು ಮಾಡಿದ್ದ ಕಾರು ಹಾಗೂ ಬೈಕ್ಗಳಲ್ಲಿ ಬಂದು ಮನೆ, ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಬೇಗೂರಿನ ಉಲ್ಲಾಸ್ ಅಲಿಯಾಸ್ ಡಾಲಿ(24), ಯಶವಂತಪುರ ನಿವಾಸಿ ಕಿರಣ್ (23) ಎಂಬುವರನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಠಾಣಾ ವ್ಯಾಪ್ತಿಯ ಅಂಗಡಿಯೊಂದರ ಬಾಗಿಲು ಒಡೆದು ₹7 ಸಾವಿರ ನಗದು ದೋಚಿ ಪರಾರಿ ಆಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೇರೋಹಳ್ಳಿ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಎಂಟು ವರ್ಷಗಳಿಂದ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಈ ಹಿಂದೆ ಬಾಲಾಪರಾಧಿಗಳಾಗಿ ಮಕ್ಕಳ ಕಲ್ಯಾಣ ಮಂಡಳಿ ಸೇರಿದ್ದರು. ಅಲ್ಲಿ ಇಬ್ಬರೂ ಪರಿಚಯವಾಗಿದ್ದರು. ಬಿಡುಗಡೆಯಾದ ಬಳಿಕ ಇಬ್ಬರೂ ಕಳ್ಳತನಕ್ಕೆ ಇಳಿದಿದ್ದರು ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 11ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಬಂಧಿತರಿಂದ ₹6 ಸಾವಿರ ನಗದು, 25 ಗ್ರಾಂ. ಚಿನ್ನಾಭರಣ, 124 ಗ್ರಾಂ. ಬೆಳ್ಳಿಯ ಸಾಮಗ್ರಿ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳವು ಮಾಡಿದ್ದ ಕಾರು ಹಾಗೂ ಬೈಕ್ಗಳಲ್ಲಿ ಬಂದು ಮನೆ, ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಬೇಗೂರಿನ ಉಲ್ಲಾಸ್ ಅಲಿಯಾಸ್ ಡಾಲಿ(24), ಯಶವಂತಪುರ ನಿವಾಸಿ ಕಿರಣ್ (23) ಎಂಬುವರನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಠಾಣಾ ವ್ಯಾಪ್ತಿಯ ಅಂಗಡಿಯೊಂದರ ಬಾಗಿಲು ಒಡೆದು ₹7 ಸಾವಿರ ನಗದು ದೋಚಿ ಪರಾರಿ ಆಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೇರೋಹಳ್ಳಿ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಎಂಟು ವರ್ಷಗಳಿಂದ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಈ ಹಿಂದೆ ಬಾಲಾಪರಾಧಿಗಳಾಗಿ ಮಕ್ಕಳ ಕಲ್ಯಾಣ ಮಂಡಳಿ ಸೇರಿದ್ದರು. ಅಲ್ಲಿ ಇಬ್ಬರೂ ಪರಿಚಯವಾಗಿದ್ದರು. ಬಿಡುಗಡೆಯಾದ ಬಳಿಕ ಇಬ್ಬರೂ ಕಳ್ಳತನಕ್ಕೆ ಇಳಿದಿದ್ದರು ಎಂದು ಪೊಲೀಸರು ಹೇಳಿದರು.</p>.<p>ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 11ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಬಂಧಿತರಿಂದ ₹6 ಸಾವಿರ ನಗದು, 25 ಗ್ರಾಂ. ಚಿನ್ನಾಭರಣ, 124 ಗ್ರಾಂ. ಬೆಳ್ಳಿಯ ಸಾಮಗ್ರಿ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>