<p><strong>ಬೆಂಗಳೂರು</strong>: ತನ್ನನ್ನು ವಶಕ್ಕೆ ಪಡೆಯಲು ಬಂದ ಪೊಲೀಸರ ಎದುರೇ ಆರೋಪಿಯೊಬ್ಬ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>‘ಠಾಣೆ ವ್ಯಾಪ್ತಿಯಲ್ಲಿ ಬೇಕರಿ ಮಾಲೀಕರ ಜೊತೆ ಜಗಳ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ ನಾಗೇಶ್ ಎಂಬಾತನನ್ನು ಬಂಧಿಸಲಾಗಿದೆ. ಇದೀಗ ಆತ, ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸ್ಥಳೀಯ ನಿವಾಸಿ ನಾಗೇಶ್, ಕುಡಿದ ಅಮಲಿನಲ್ಲಿ ಫೆ. 26ರಂದು ರಾತ್ರಿ ಬಸವನಪುರ ವೃತ್ತ ಬಳಿಯ ಬೇಕರಿಯೊಂದಕ್ಕೆ ಹೋಗಿ ಗಲಾಟೆ ಮಾಡಿದ್ದ. ಬೇಕರಿ ಮಾಲೀಕ ಹರೀಶ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ಸ್ಥಳಕ್ಕೆ ಹೋಗಿದ್ದರು.’</p>.<p>‘ಪೊಲೀಸರ ಜೊತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಮವಸ್ತ್ರ ಹಿಡಿದು ಎಳೆದಾಡಿದ್ದ ಆರೋಪಿ, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ಪತ್ನಿ ಹಾಗೂ ಮಕ್ಕಳನ್ನು ಸ್ಥಳಕ್ಕೆ ಕರೆಸಿದ್ದ ಆರೋಪಿ, ಹೊಯ್ಸಳ ಗಸ್ತು ವಾಹನದ ಮುಂದೆ ಮಲಗಿ ಪ್ರತಿಭಟನೆ ಮಾಡುವಂತೆ ಹೇಳಿದ್ದ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಸ್ಥಳೀಯರ ಸಹಾಯದಿಂದ ನಾಗೇಶ್ನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಲಾಯಿತು’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತನ್ನನ್ನು ವಶಕ್ಕೆ ಪಡೆಯಲು ಬಂದ ಪೊಲೀಸರ ಎದುರೇ ಆರೋಪಿಯೊಬ್ಬ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>‘ಠಾಣೆ ವ್ಯಾಪ್ತಿಯಲ್ಲಿ ಬೇಕರಿ ಮಾಲೀಕರ ಜೊತೆ ಜಗಳ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ ನಾಗೇಶ್ ಎಂಬಾತನನ್ನು ಬಂಧಿಸಲಾಗಿದೆ. ಇದೀಗ ಆತ, ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಸ್ಥಳೀಯ ನಿವಾಸಿ ನಾಗೇಶ್, ಕುಡಿದ ಅಮಲಿನಲ್ಲಿ ಫೆ. 26ರಂದು ರಾತ್ರಿ ಬಸವನಪುರ ವೃತ್ತ ಬಳಿಯ ಬೇಕರಿಯೊಂದಕ್ಕೆ ಹೋಗಿ ಗಲಾಟೆ ಮಾಡಿದ್ದ. ಬೇಕರಿ ಮಾಲೀಕ ಹರೀಶ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ಸ್ಥಳಕ್ಕೆ ಹೋಗಿದ್ದರು.’</p>.<p>‘ಪೊಲೀಸರ ಜೊತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಮವಸ್ತ್ರ ಹಿಡಿದು ಎಳೆದಾಡಿದ್ದ ಆರೋಪಿ, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ಪತ್ನಿ ಹಾಗೂ ಮಕ್ಕಳನ್ನು ಸ್ಥಳಕ್ಕೆ ಕರೆಸಿದ್ದ ಆರೋಪಿ, ಹೊಯ್ಸಳ ಗಸ್ತು ವಾಹನದ ಮುಂದೆ ಮಲಗಿ ಪ್ರತಿಭಟನೆ ಮಾಡುವಂತೆ ಹೇಳಿದ್ದ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಸ್ಥಳೀಯರ ಸಹಾಯದಿಂದ ನಾಗೇಶ್ನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಲಾಯಿತು’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>