<p><strong>ಬೆಂಗಳೂರು:</strong> ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೌಡಿಶೀಟರ್ ಸೇರಿ ನಾಲ್ವರು ಆರೋಪಿಗಳನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರೌಡಿಶೀಟರ್ ಶಾಜದ್ ಪಾಷಾ (25), ಈತನ ಸಹಚರರಾದ ಅನೀಸ್ ಪಾಷ, ಯಾಸೀನ್ ಅಹ್ಮದ್ ಶರೀಫ್ ಬಂಧಿತರು.</p>.<p>ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿತ್ತು. ಆರೋಪಿಗಳು ತಿಲಕನಗರದ ಕೃಷ್ಣಪ್ಪ ಗಾರ್ಡ್ನಲ್ಲಿ ಇರುವ ಮಾಹಿತಿ ಸಂಗ್ರಹಿಸಿದ್ದ ಕಲಾಸಿಪಾಳ್ಯ ಠಾಣೆಯ ಹೆಡ್ ಕಾನ್ಸ್ಟೆಬಲ್ಗಳಾದ ಶಶಿಧರ್ ಮೊಕಾಶಿ, ಹರೀಶ್, ವೈ.ಬಿ. ರಂಗನಾಥ್ ಹಾಗೂ ಕಾನ್ಸ್ಟೆಬಲ್ ಮೌನೇಶ್ ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.</p>.<p>ಮತ್ತೊಂದು ಪ್ರಕರಣದಲ್ಲಿ ಜಯನಗರ ಸಂಚಾರ ಠಾಣೆಯ ಸಿಬ್ಬಂದಿ ಉಮಾಶಂಕರ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತಿಲಕನಗರ ನಿವಾಸಿ ಪ್ರವೀಣ್(34) ಬಂಧಿತ ಆರೋಪಿ.</p>.<p>ಆರೋಪಿ ನ.5ರಂದು ಜಯನಗರ ಸಂಚಾರ ಠಾಣೆಯ ಹೆಡ್ಕಾನ್ಸ್ಟೆಬಲ್ ಉಮಾಶಂಕರ್ ಮೇಲೆ ಹಲ್ಲೆ ನಡೆಸಿದ್ದ. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೌಡಿಶೀಟರ್ ಸೇರಿ ನಾಲ್ವರು ಆರೋಪಿಗಳನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ರೌಡಿಶೀಟರ್ ಶಾಜದ್ ಪಾಷಾ (25), ಈತನ ಸಹಚರರಾದ ಅನೀಸ್ ಪಾಷ, ಯಾಸೀನ್ ಅಹ್ಮದ್ ಶರೀಫ್ ಬಂಧಿತರು.</p>.<p>ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ನ್ಯಾಯಾಲಯ ಬಂಧನದ ವಾರಂಟ್ ಹೊರಡಿಸಿತ್ತು. ಆರೋಪಿಗಳು ತಿಲಕನಗರದ ಕೃಷ್ಣಪ್ಪ ಗಾರ್ಡ್ನಲ್ಲಿ ಇರುವ ಮಾಹಿತಿ ಸಂಗ್ರಹಿಸಿದ್ದ ಕಲಾಸಿಪಾಳ್ಯ ಠಾಣೆಯ ಹೆಡ್ ಕಾನ್ಸ್ಟೆಬಲ್ಗಳಾದ ಶಶಿಧರ್ ಮೊಕಾಶಿ, ಹರೀಶ್, ವೈ.ಬಿ. ರಂಗನಾಥ್ ಹಾಗೂ ಕಾನ್ಸ್ಟೆಬಲ್ ಮೌನೇಶ್ ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.</p>.<p>ಮತ್ತೊಂದು ಪ್ರಕರಣದಲ್ಲಿ ಜಯನಗರ ಸಂಚಾರ ಠಾಣೆಯ ಸಿಬ್ಬಂದಿ ಉಮಾಶಂಕರ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತಿಲಕನಗರ ನಿವಾಸಿ ಪ್ರವೀಣ್(34) ಬಂಧಿತ ಆರೋಪಿ.</p>.<p>ಆರೋಪಿ ನ.5ರಂದು ಜಯನಗರ ಸಂಚಾರ ಠಾಣೆಯ ಹೆಡ್ಕಾನ್ಸ್ಟೆಬಲ್ ಉಮಾಶಂಕರ್ ಮೇಲೆ ಹಲ್ಲೆ ನಡೆಸಿದ್ದ. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>