<p><strong>ಬೆಂಗಳೂರು:</strong> ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ₹ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಠಾಣೆಯ ಪಿಎಸ್ಐ ಮತ್ತು ಪಿಐ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಅವರ ಹೆಸರನ್ನು ಕೈಬಿಡಲು ಪಿಐ ಶಿವಾಜಿ ರಾವ್ ಮತ್ತು ಪಿಎಸ್ಐ ಶಿವಾನಂದ ಜಿ. ಅವರು ₹6 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶವಮೂರ್ತಿ ಅವರು ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.</p><p>ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಬಳಿಯಲ್ಲೇ ಪಿಐ ಮತ್ತು ಪಿಎಸ್ಐಗೆ ₹ 1 ಲಕ್ಷ ನೀಡಿದ್ದರು. </p><p>ಈ ವೇಳೆಯೇ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಿದರು. ₹1 ಲಕ್ಷ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ₹ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಠಾಣೆಯ ಪಿಎಸ್ಐ ಮತ್ತು ಪಿಐ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.</p><p>ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಅವರ ಹೆಸರನ್ನು ಕೈಬಿಡಲು ಪಿಐ ಶಿವಾಜಿ ರಾವ್ ಮತ್ತು ಪಿಎಸ್ಐ ಶಿವಾನಂದ ಜಿ. ಅವರು ₹6 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶವಮೂರ್ತಿ ಅವರು ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.</p><p>ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಬಳಿಯಲ್ಲೇ ಪಿಐ ಮತ್ತು ಪಿಎಸ್ಐಗೆ ₹ 1 ಲಕ್ಷ ನೀಡಿದ್ದರು. </p><p>ಈ ವೇಳೆಯೇ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಿದರು. ₹1 ಲಕ್ಷ ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>