ಕಾವಲ್ ಭೈರಸಂದ್ರ, ಮೋದಿ ರಸ್ತೆ, ಶ್ಯಾಂಪುರ ಮುಖ್ಯರಸ್ತೆ, ಟ್ಯಾನರಿ ರಸ್ತೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಚುನಾವಣಾ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಆ ಭಾಗದ ಡಿಸಿಪಿಯಿಂದಲೂ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ, ದಾಖಲೆಗಳಿಲ್ಲದ ವಸ್ತುಗಳ ವಶಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡರು. ವಿಧಾನಸಭೆ ಚುನಾವಣೆಯ ಮತದಾನ ದಿನವು ಸಮೀಪಿಸುತ್ತಿದ್ದು, ಎಚ್ಚರ ವಹಿಸುವಂತೆ ಸ್ಥಳದಲ್ಲಿದ್ದ ಸಿಬ್ಬಂದಿಗೆ ಸೂಚಿಸಿದರು.