ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಶನಿವಾರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಭಾಸ್ಕರ್ ರಾವ್, ‘ನಗರವನ್ನು ಅಪರಾಧ ಮುಕ್ತವಾಗಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ‘ಎಂದೆಂದಿಗೂ ನಾವು ನಿಮ್ಮೊಂದಿಗೆ‘ ಎಂಬ ಘೋಷವಾಕ್ಯದೊಂದಿಗೆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.