<p><strong>ಬೆಂಗಳೂರು: ‘</strong>ಸಂಚಾರ ನಿಯಮ ಉಲ್ಲಂಘಿಸುವವರಿಂದ ಹಳೇ ದಂಡದ ಮೊತ್ತವನ್ನೇ ಸಂಗ್ರಹಿಸುವ ಬಗ್ಗೆ ಯಾವುದೇ ಆದೇಶ ಬಂದಿಲ್ಲ. ಹೀಗಾಗಿ, ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ಪ್ರತಿಕ್ರಿಯಿಸಲಾರೆ’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.</p>.<p>ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸೆಪ್ಟೆಂಬರ್ 4ರಂದು ಹೊರಡಿಸಿರುವ ಅಧಿಸೂಚನೆಯಂತೆ ಸದ್ಯ ದಂಡ ಸಂಗ್ರಹಿಸಲಾಗುತ್ತಿದೆ. ಹೊಸ ಆದೇಶ ಬಂದರೆ ಪಾಲಿಸುತ್ತೇವೆ’ ಎಂದರು.</p>.<p>‘ದೇಶದಾದ್ಯಂತ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಸಂಚಾರ ನಿಯಮಗಳ ಬಗ್ಗೆ ಶಿಸ್ತು ಬರಲಿ ಹಾಗೂ ಸಾರ್ವಜನಿಕರ ಪ್ರಾಣ ಉಳಿಯಲಿ ಎಂಬ ಕಾರಣಕ್ಕೆ ದಂಡದ ಮೊತ್ತ ಹೆಚ್ಚಿಸಲಾಗಿದೆ. ಜನರು ನಿಯಮ ಪಾಲನೆ ಮಾಡಿದರೆ, ದಂಡ ಪಾವತಿಸಬೇಕಾದ ಅಗತ್ಯವೇ ಇರುವುದಿಲ್ಲ’ ಎಂದರು.</p>.<p>‘ವಾಹನ ಗಳ ತಪಾಸಣೆ ವೇಳೆ ಮಾನವೀಯತೆಯಿಂದ ವರ್ತಿಸುವಂತೆ ಸಂಚಾರ ಪೊಲೀಸರಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<p class="Subhead">ಶಾಲೆ, ಕಚೇರಿಗಳಿಗೆ ನೋಟಿಸ್: ‘ಕೆಲ ಶಾಲಾ ಆಡಳಿತ ಮಂಡಳಿಯವರು ಹಾಗೂ ಖಾಸಗಿ ಕಂಪನಿಯವರು, ತಮ್ಮ ವಾಹನಗಳನ್ನು ಸಾರ್ವಜನಿಕ ರಸ್ತೆಗಳಲ್ಲೇ ನಿಲ್ಲಿಸುತ್ತಿದ್ದಾರೆ. ಅಂಥವರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಎಚ್ಚೆತ್ತುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಭಾಸ್ಕರ್ ರಾವ್ ಹೇಳಿದರು.</p>.<p>‘ಒಂದು ರಸ್ತೆಯಲ್ಲಿ ಅಸಂಖ್ಯ ಜನ ಓಡಾಡುತ್ತಾರೆ. ಕೆಲವೇ ಜನ, ಆ ರಸ್ತೆಯನ್ನು ಅತಿಕ್ರಮಿಸಿಕೊಂಡು ವಾಹನ ನಿಲ್ಲಿಸುವುದು ಕಾನೂನಿನ ಉಲ್ಲಂಘನೆ ಆಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸಂಚಾರ ನಿಯಮ ಉಲ್ಲಂಘಿಸುವವರಿಂದ ಹಳೇ ದಂಡದ ಮೊತ್ತವನ್ನೇ ಸಂಗ್ರಹಿಸುವ ಬಗ್ಗೆ ಯಾವುದೇ ಆದೇಶ ಬಂದಿಲ್ಲ. ಹೀಗಾಗಿ, ಮಾಧ್ಯಮಗಳಲ್ಲಿ ಬಂದ ವರದಿ ಬಗ್ಗೆ ಪ್ರತಿಕ್ರಿಯಿಸಲಾರೆ’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.</p>.<p>ತಮ್ಮ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸೆಪ್ಟೆಂಬರ್ 4ರಂದು ಹೊರಡಿಸಿರುವ ಅಧಿಸೂಚನೆಯಂತೆ ಸದ್ಯ ದಂಡ ಸಂಗ್ರಹಿಸಲಾಗುತ್ತಿದೆ. ಹೊಸ ಆದೇಶ ಬಂದರೆ ಪಾಲಿಸುತ್ತೇವೆ’ ಎಂದರು.</p>.<p>‘ದೇಶದಾದ್ಯಂತ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಸಂಚಾರ ನಿಯಮಗಳ ಬಗ್ಗೆ ಶಿಸ್ತು ಬರಲಿ ಹಾಗೂ ಸಾರ್ವಜನಿಕರ ಪ್ರಾಣ ಉಳಿಯಲಿ ಎಂಬ ಕಾರಣಕ್ಕೆ ದಂಡದ ಮೊತ್ತ ಹೆಚ್ಚಿಸಲಾಗಿದೆ. ಜನರು ನಿಯಮ ಪಾಲನೆ ಮಾಡಿದರೆ, ದಂಡ ಪಾವತಿಸಬೇಕಾದ ಅಗತ್ಯವೇ ಇರುವುದಿಲ್ಲ’ ಎಂದರು.</p>.<p>‘ವಾಹನ ಗಳ ತಪಾಸಣೆ ವೇಳೆ ಮಾನವೀಯತೆಯಿಂದ ವರ್ತಿಸುವಂತೆ ಸಂಚಾರ ಪೊಲೀಸರಿಗೆ ಸೂಚನೆ ನೀಡಲಾಗಿದೆ’ ಎಂದರು.</p>.<p class="Subhead">ಶಾಲೆ, ಕಚೇರಿಗಳಿಗೆ ನೋಟಿಸ್: ‘ಕೆಲ ಶಾಲಾ ಆಡಳಿತ ಮಂಡಳಿಯವರು ಹಾಗೂ ಖಾಸಗಿ ಕಂಪನಿಯವರು, ತಮ್ಮ ವಾಹನಗಳನ್ನು ಸಾರ್ವಜನಿಕ ರಸ್ತೆಗಳಲ್ಲೇ ನಿಲ್ಲಿಸುತ್ತಿದ್ದಾರೆ. ಅಂಥವರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಎಚ್ಚೆತ್ತುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಭಾಸ್ಕರ್ ರಾವ್ ಹೇಳಿದರು.</p>.<p>‘ಒಂದು ರಸ್ತೆಯಲ್ಲಿ ಅಸಂಖ್ಯ ಜನ ಓಡಾಡುತ್ತಾರೆ. ಕೆಲವೇ ಜನ, ಆ ರಸ್ತೆಯನ್ನು ಅತಿಕ್ರಮಿಸಿಕೊಂಡು ವಾಹನ ನಿಲ್ಲಿಸುವುದು ಕಾನೂನಿನ ಉಲ್ಲಂಘನೆ ಆಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>