‘ತಮ್ಮದೇ ಗ್ಯಾಂಗ್ ಕಟ್ಟಿಕೊಂಡು ಜನರನ್ನು ಹೆದರಿಸಿ ವಿವಾದಿತ ಜಾಗವನ್ನು ಕಬಳಿಸುವ ದೊರೆಗಳು ನಗರದಲ್ಲಿದ್ದಾರೆ. ಅವರಿಗೆ ಶಿಷ್ಯಂದಿರು ಇದ್ದು, ಅವರೆಲ್ಲರನ್ನೂ ನಾನು ಗಮನಿಸುತ್ತಿದ್ದೇನೆ. ಅವರ ಜೊತೆಗಿರುವ ಪೊಲೀಸರ ಬಗ್ಗೆಯೂ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಪುರಾವೆ ಸಿಕ್ಕರೆ ಪೊಲೀಸರ ವಿರುದ್ಧವೂ ಕ್ರಿಮಿನಲ್ ಕ್ರಮ ಜರುಗಿಸುತ್ತೇನೆ’ ಎಂದು ಭಾಸ್ಕರ್ ರಾವ್ ಹೇಳಿದರು.