<p><strong>ಬೆಂಗಳೂರು</strong>: ದೇಶದ ಗಡಿಯಲ್ಲಿ ಉದ್ಭವಿಸಿರುವ ಸಂಘರ್ಷದ ಸನ್ನಿವೇಶವನ್ನು ಬಳಸಿಕೊಂಡು ಸೈಬರ್ ಕಳ್ಳರು ವಂಚನೆ ಎಸಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಮನವಿ ಮಾಡಿದ್ದಾರೆ.</p>.<p>ಸುಳ್ಳು ಸುದ್ದಿ, ಫಿಶಿಂಗ್, ನಕಲಿ ಲಿಂಕ್ಗಳ ಮೂಲಕ ಸೈಬರ್ ವಂಚಕರು ವಂಚನೆ ನಡೆಸುವ ಸಾಧ್ಯತೆಗಳು ಇವೆ ಎಂದು ಅವರು ಎಚ್ಚರಿಸಿದ್ದಾರೆ.</p>.<p>ತಮ್ಮ ವಾಟ್ಸ್ಆ್ಯಪ್ ಖಾತೆಗೆ ಎಪಿಕೆ ಫೈಲ್ ಬಂದರೆ ಅದನ್ನು ತೆರೆಯುವುದು ಬೇಡ. ಆ್ಯಪ್ಗಳನ್ನು ಡೌನ್ಲೋಡ್ ಮಾಡಲು ಅಧಿಕೃತವಾದ ಪ್ಲೇ–ಸ್ಟೋರ್ ಅನ್ನೇ ಬಳಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<p>ಸೇನೆಗೆ ತುರ್ತಾಗಿ ನೇಮಕಾತಿ ನಡೆಸಲಾಗುತ್ತಿದೆ ಎಂದು ನಕಲಿ ಲಿಂಕ್ ಕಳುಹಿಸಿ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕದಿಯುವ ಸಾಧ್ಯತೆ ಇದೆ. ನಕಲಿ ಲಿಂಕ್ಗಳು ಬಂದರೆ ತಕ್ಷಣವೇ ಡಿಲಿಟ್ ಮಾಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<p>ಸೈಬರ್ ದಾಳಿಗೆ ಒಳಗಾದರೆ ಆತಂಕ ಪಡುವುದು ಬೇಡ. ತಕ್ಷಣವೇ ಸಹಾಯವಾಣಿ 1930ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇಶದ ಗಡಿಯಲ್ಲಿ ಉದ್ಭವಿಸಿರುವ ಸಂಘರ್ಷದ ಸನ್ನಿವೇಶವನ್ನು ಬಳಸಿಕೊಂಡು ಸೈಬರ್ ಕಳ್ಳರು ವಂಚನೆ ಎಸಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಮನವಿ ಮಾಡಿದ್ದಾರೆ.</p>.<p>ಸುಳ್ಳು ಸುದ್ದಿ, ಫಿಶಿಂಗ್, ನಕಲಿ ಲಿಂಕ್ಗಳ ಮೂಲಕ ಸೈಬರ್ ವಂಚಕರು ವಂಚನೆ ನಡೆಸುವ ಸಾಧ್ಯತೆಗಳು ಇವೆ ಎಂದು ಅವರು ಎಚ್ಚರಿಸಿದ್ದಾರೆ.</p>.<p>ತಮ್ಮ ವಾಟ್ಸ್ಆ್ಯಪ್ ಖಾತೆಗೆ ಎಪಿಕೆ ಫೈಲ್ ಬಂದರೆ ಅದನ್ನು ತೆರೆಯುವುದು ಬೇಡ. ಆ್ಯಪ್ಗಳನ್ನು ಡೌನ್ಲೋಡ್ ಮಾಡಲು ಅಧಿಕೃತವಾದ ಪ್ಲೇ–ಸ್ಟೋರ್ ಅನ್ನೇ ಬಳಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<p>ಸೇನೆಗೆ ತುರ್ತಾಗಿ ನೇಮಕಾತಿ ನಡೆಸಲಾಗುತ್ತಿದೆ ಎಂದು ನಕಲಿ ಲಿಂಕ್ ಕಳುಹಿಸಿ ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕದಿಯುವ ಸಾಧ್ಯತೆ ಇದೆ. ನಕಲಿ ಲಿಂಕ್ಗಳು ಬಂದರೆ ತಕ್ಷಣವೇ ಡಿಲಿಟ್ ಮಾಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.</p>.<p>ಸೈಬರ್ ದಾಳಿಗೆ ಒಳಗಾದರೆ ಆತಂಕ ಪಡುವುದು ಬೇಡ. ತಕ್ಷಣವೇ ಸಹಾಯವಾಣಿ 1930ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>