<p><strong>ಬೆಂಗಳೂರು: </strong>ಕೊರೊನಾ ಸೋಂಕಿನ ಎರಡನೇ ಅಲೆ ಹರಡುವಿಕೆ ತಡೆಗಾಗಿ ಇಂದು ರಾತ್ರಿಯಿಂದ ಜ. 1ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಇದಕ್ಕಾಗಿ ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.</p>.<p>ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ‘ರಾತ್ರಿ ವೇಳೆ ಕಂಪನಿಗಳಲ್ಲಿ ಕೆಲಸ ಮಾಡುವವರು ಗುರುತಿನ ಚೀಟಿ ಇಟ್ಟುಕೊಂಡಿರಬೇಕು' ಎಂದಿದ್ದಾರೆ.</p>.<p>‘ಗುರುವಾರ ರಾತ್ರಿ 11ರಿಂದ ಬೆಳಿಗ್ಗೆ 5ವರೆಗೆ ಕರ್ಫ್ಯೂ ಇರಲಿದೆ. ಬೆಂಗಳೂರಿನ ಜನ ಸಹಕರಿಸಬೇಕು. ಇಮಾನ ನಿಲ್ದಾಣ, ರೈಲ್ವೆ ನಿಲ್ದಾಣದ ಬಳಿ ಆಟೋ-ಟ್ಯಾಕ್ಸಿ ಲಭ್ಯವಿರಲಿವೆ. ಭದ್ರತಾ ಸಿಬ್ಬಂದಿಗೆ ಪ್ರಯಾಣಿಕರು ಟಿಕೆಟ್ ತೋರಿಸುವುದು ಕಡ್ಡಾಯ' ಎಂದರು.<br />‘ಅನಾವಶ್ಯಕವಾಗಿ ಓಡಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು' ಎಂದರು.</p>.<p>‘ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆಗೆ ಯಾವುದೇ ಅವಕಾಶವಿಲ್ಲ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಜನರು ಸೇರುವಂತಿಲ್ಲ. ರಾತ್ರಿ 11ರ ಬಳಿಕ ವಿನಾಕಾರಣ ರಸ್ತೆಗಳಿಯುವಂತಿಲ್ಲ. ನಿಯಮ ಉಲ್ಲಂಘಿಸಿದರೆ ತಪ್ಪಿತಸ್ಥರನ್ನು ವಶಕ್ಕೆ ಪಡೆಯಲಾಗುವುದು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕಿನ ಎರಡನೇ ಅಲೆ ಹರಡುವಿಕೆ ತಡೆಗಾಗಿ ಇಂದು ರಾತ್ರಿಯಿಂದ ಜ. 1ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಇದಕ್ಕಾಗಿ ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.</p>.<p>ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ‘ರಾತ್ರಿ ವೇಳೆ ಕಂಪನಿಗಳಲ್ಲಿ ಕೆಲಸ ಮಾಡುವವರು ಗುರುತಿನ ಚೀಟಿ ಇಟ್ಟುಕೊಂಡಿರಬೇಕು' ಎಂದಿದ್ದಾರೆ.</p>.<p>‘ಗುರುವಾರ ರಾತ್ರಿ 11ರಿಂದ ಬೆಳಿಗ್ಗೆ 5ವರೆಗೆ ಕರ್ಫ್ಯೂ ಇರಲಿದೆ. ಬೆಂಗಳೂರಿನ ಜನ ಸಹಕರಿಸಬೇಕು. ಇಮಾನ ನಿಲ್ದಾಣ, ರೈಲ್ವೆ ನಿಲ್ದಾಣದ ಬಳಿ ಆಟೋ-ಟ್ಯಾಕ್ಸಿ ಲಭ್ಯವಿರಲಿವೆ. ಭದ್ರತಾ ಸಿಬ್ಬಂದಿಗೆ ಪ್ರಯಾಣಿಕರು ಟಿಕೆಟ್ ತೋರಿಸುವುದು ಕಡ್ಡಾಯ' ಎಂದರು.<br />‘ಅನಾವಶ್ಯಕವಾಗಿ ಓಡಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು' ಎಂದರು.</p>.<p>‘ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆಗೆ ಯಾವುದೇ ಅವಕಾಶವಿಲ್ಲ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಜನರು ಸೇರುವಂತಿಲ್ಲ. ರಾತ್ರಿ 11ರ ಬಳಿಕ ವಿನಾಕಾರಣ ರಸ್ತೆಗಳಿಯುವಂತಿಲ್ಲ. ನಿಯಮ ಉಲ್ಲಂಘಿಸಿದರೆ ತಪ್ಪಿತಸ್ಥರನ್ನು ವಶಕ್ಕೆ ಪಡೆಯಲಾಗುವುದು’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>