‘ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ನಗರ ಎಲ್ಲ ಕಡೆಯೂ ನಾಳೆ ಬಿಗಿ ಭದ್ರತೆ ಇರಲಿದೆ. ಬಲವಂತವಾಗಿ ಅಂಗಡಿಗಳನ್ನು ಬಂದ್ ಮಾಡಿಸುವಂತಿಲ್ಲ. ಸಾರ್ವಜನಿಕರು ಹಾಗೂ ಅವರ ಆಸ್ತಿಗೆ ಧಕ್ಕೆ ತರುವಂತಿಲ್ಲ. ಪ್ರತಿಭಟನೆಗೆ ಕರೆ ನೀಡಿದ್ದಾರೆ ಎನ್ನಲಾದ ಕೆಲವರಿಂದ ಈಗಾಗಲೇ ಮುಚ್ಚಳಿಕೆ ಬರೆಸಿಕೊಳ್ಳಲಾಗಿದ್ದು, ಯಾವುದೇ ಅನಾಹುತ ಸಂಭವಿಸಿದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದೂ ಕಮಲ್ ಪಂತ್ ತಿಳಿಸಿದರು.