ಬೆಂಗಳೂರು: ‘ಪೊಲೀಸರ ಜೊತೆ ಜನರು ಸಹಕರಿಸಬೇಕು. ಜನರೇ ಕೊರೊನಾ ಯೋಧರಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
‘ಪ್ರತಿಯೊಬ್ಬರೂ ಮಾಸ್ಕ್ ಧರಿಸಿಕೊಂಡು ಓಡಾಡಬೇಕು. ಸೋಪು ಅಥವಾ ಸ್ಯಾನಿಟೈಸರ್ನಿಂದ ಆಗಾಗ ಕೈ ತೊಳೆಯಬೇಕು. ಪರಸ್ಪರ ಅಂತರ ಕಾಯ್ದುಕೊಂಡು ಓಡಾಡಬೇಕು’ ಎಂದೂ ಅವರು ತಿಳಿಸಿದ್ದಾರೆ.