‘ಆಟೊ ಚಾಲಕರು ಹಾಗೂ ಬೈಕ್ ಸವಾರರು, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಾರೆ. ಶಿಸ್ತುಪಥ ನಿಯಮ ಪಾಲಿಸುವುದಿಲ್ಲ. ಇದರಿಂದಾಗಿ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಿವೆ. ಇದನ್ನು ಪ್ರಶ್ನಿಸಿದರೆ, ಆಟೊ ಚಾಲಕರು ಹಾಗೂ ಬೈಕ್ ಸವಾರರು ಜಗಳ ಮಾಡುತ್ತಾರೆ’ ಎಂದು ಶ್ರೀಕಾಂತ್ ಎಂಬುವರು ದೂರಿದರು.