'ಮಂಡ್ಯದ ಪ್ರತಾಪ್, 87 ದೇಶ ಸುತ್ತಿರುವುದಾಗಿ ಹಾಗೂ 300 ಉಪನ್ಯಾಸ ನೀಡಿರುವುದಾಗಿ ಸುಳ್ಳು ಹೇಳಿದ್ದಾನೆ. ವಿದೇಶದಲ್ಲಿ ನಡೆದ ಪ್ರದರ್ಶನದಲ್ಲೂ ಭಾಗವಹಿಸಿ ಚಿನ್ನದ ಪದಕ ಗೆದ್ದಿರುವುದಾಗಿ ಹೇಳುತ್ತಿದ್ದಾನೆ. ಇಂಥ ಸುಳ್ಳುಗಳನ್ನೇ ಮುಂದಿಟ್ಟುಕೊಂಡು ಹಲವು ಗಣ್ಯರು, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹಣ ಪಡೆದಿರುವ ಮಾಹಿತಿ ಇದೆ' ಎಂದು ದೂರಿನಲ್ಲಿ ಜಾರ್ಜ್ ಅವರು ಉಲ್ಲೇಖಿಸಿದ್ದಾರೆ.