<p><strong>ಬೆಂಗಳೂರು:</strong> ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಿಲುಗಡೆ ಮಾಡಿದ್ದ ಕಾರಿನಲ್ಲಿದ್ದ ₹11 ಲಕ್ಷ ಹಣ ಕದ್ದು ನಾಟಕವಾಡಿದ್ದ ಹೆಡ್ ಕಾನ್ಸ್ಟೆಬಲ್ ಜಬೀವುಲ್ಲಾ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೇಂದ್ರ ವಿಭಾಗದ ಸೈಬರ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಅವರು ನೀಡಿದ ದೂರಿನ ಮೇರೆಗೆ ಜಬೀವುಲ್ಲಾ ಅವರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಇತ್ತೀಚೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಆಗಿತ್ತು. ವಂಚಕನ ಪತ್ತೆಗಾಗಿ ಆರ್ಎಸ್ಐ ಮಂಜುನಾಥ್ ನೇತೃತ್ವದ ತಂಡವನ್ನು ಇನ್ಸ್ಪೆಕ್ಟರ್ ಉಮೇಶ್ ರಚಿಸಿದ್ದರು. ಈ ತಂಡದಲ್ಲಿ ಆರೋಪಿತ ಹೆಡ್ ಕಾನ್ಸ್ಟೆಬಲ್ ಸಹ ಇದ್ದರು ಎಂದು ಮೂಲಗಳು ಹೇಳಿವೆ. </p>.<p>ಸೈಬರ್ ಅಪರಾಧ ಪ್ರಕರಣವೊಂದರಲ್ಲಿ ಬಂಧಿಸಲಾಗಿದ್ದ ಆರೋಪಿಯನ್ನು ಕಮಿಷನರ್ ಕಚೇರಿ ಆವರಣದಲ್ಲಿರುವ ಸಿಸಿಬಿ ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆಂದು ತನಿಖಾಧಿಕಾರಿಗಳು ಕರೆತಂದಿದ್ದರು. ಜಪ್ತಿ ಮಾಡಿಕೊಂಡಿದ್ದ ಆರೋಪಿಯ ಕಾರನ್ನು ಸಹ ತಂದಿದ್ದರು. ಆ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿದ್ದರು. ಕಳ್ಳತನ ಮಾಡುತ್ತಿದ್ದ ದೃಶ್ಯ ಸೆರೆಯಾಗಿತ್ತು. ಅದನ್ನು ಆಧರಿಸಿ, ತನಿಖೆ ನಡೆಸಿದಾಗ ಜಬೀವುಲ್ಲಾ ಕೃತ್ಯ ಎಸಗಿರುವುದು ಸಾಬೀತಾಗಿತ್ತು ಎಂದು ತನಿಖಾ ಮೂಲಗಳು ಹೇಳಿವೆ.</p>.<p>‘ಕದ್ದ ಹಣದಿಂದ ಜಬೀವುಲ್ಲಾ ಅವರು ಪತ್ನಿಗೆ ಚಿನ್ನದ ಆಭರಣ ಮಾಡಿಸಿಕೊಟ್ಟಿದ್ದರು. ಉಳಿದ ಹಣವನ್ನು ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದರು’ ಎಂದು ಪೊಲೀಸರು ಹೇಳಿದರು.</p>.Bengaluru Crime: ಆರೋಪಿ ಕಾರಿನಲ್ಲಿದ್ದ ₹11 ಲಕ್ಷ ಕದ್ದ ಕಾನ್ಸ್ಟೆಬಲ್ ಬಂಧನ
<p><strong>ಬೆಂಗಳೂರು:</strong> ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಿಲುಗಡೆ ಮಾಡಿದ್ದ ಕಾರಿನಲ್ಲಿದ್ದ ₹11 ಲಕ್ಷ ಹಣ ಕದ್ದು ನಾಟಕವಾಡಿದ್ದ ಹೆಡ್ ಕಾನ್ಸ್ಟೆಬಲ್ ಜಬೀವುಲ್ಲಾ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೇಂದ್ರ ವಿಭಾಗದ ಸೈಬರ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಅವರು ನೀಡಿದ ದೂರಿನ ಮೇರೆಗೆ ಜಬೀವುಲ್ಲಾ ಅವರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಇತ್ತೀಚೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಆಗಿತ್ತು. ವಂಚಕನ ಪತ್ತೆಗಾಗಿ ಆರ್ಎಸ್ಐ ಮಂಜುನಾಥ್ ನೇತೃತ್ವದ ತಂಡವನ್ನು ಇನ್ಸ್ಪೆಕ್ಟರ್ ಉಮೇಶ್ ರಚಿಸಿದ್ದರು. ಈ ತಂಡದಲ್ಲಿ ಆರೋಪಿತ ಹೆಡ್ ಕಾನ್ಸ್ಟೆಬಲ್ ಸಹ ಇದ್ದರು ಎಂದು ಮೂಲಗಳು ಹೇಳಿವೆ. </p>.<p>ಸೈಬರ್ ಅಪರಾಧ ಪ್ರಕರಣವೊಂದರಲ್ಲಿ ಬಂಧಿಸಲಾಗಿದ್ದ ಆರೋಪಿಯನ್ನು ಕಮಿಷನರ್ ಕಚೇರಿ ಆವರಣದಲ್ಲಿರುವ ಸಿಸಿಬಿ ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆಂದು ತನಿಖಾಧಿಕಾರಿಗಳು ಕರೆತಂದಿದ್ದರು. ಜಪ್ತಿ ಮಾಡಿಕೊಂಡಿದ್ದ ಆರೋಪಿಯ ಕಾರನ್ನು ಸಹ ತಂದಿದ್ದರು. ಆ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿದ್ದರು. ಕಳ್ಳತನ ಮಾಡುತ್ತಿದ್ದ ದೃಶ್ಯ ಸೆರೆಯಾಗಿತ್ತು. ಅದನ್ನು ಆಧರಿಸಿ, ತನಿಖೆ ನಡೆಸಿದಾಗ ಜಬೀವುಲ್ಲಾ ಕೃತ್ಯ ಎಸಗಿರುವುದು ಸಾಬೀತಾಗಿತ್ತು ಎಂದು ತನಿಖಾ ಮೂಲಗಳು ಹೇಳಿವೆ.</p>.<p>‘ಕದ್ದ ಹಣದಿಂದ ಜಬೀವುಲ್ಲಾ ಅವರು ಪತ್ನಿಗೆ ಚಿನ್ನದ ಆಭರಣ ಮಾಡಿಸಿಕೊಟ್ಟಿದ್ದರು. ಉಳಿದ ಹಣವನ್ನು ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದರು’ ಎಂದು ಪೊಲೀಸರು ಹೇಳಿದರು.</p>.Bengaluru Crime: ಆರೋಪಿ ಕಾರಿನಲ್ಲಿದ್ದ ₹11 ಲಕ್ಷ ಕದ್ದ ಕಾನ್ಸ್ಟೆಬಲ್ ಬಂಧನ