<p><strong>ಬೆಂಗಳೂರು:</strong> ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಿಲುಗಡೆ ಮಾಡಿದ್ದ ಕಾರಿನಲ್ಲಿದ್ದ ₹11 ಲಕ್ಷ ಹಣ ಕದ್ದು ನಾಟಕವಾಡಿದ್ದ ಹೆಡ್ ಕಾನ್ಸ್ಟೆಬಲ್ ಜಬೀವುಲ್ಲಾ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೇಂದ್ರ ವಿಭಾಗದ ಸೈಬರ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಅವರು ನೀಡಿದ ದೂರಿನ ಮೇರೆಗೆ ಜಬೀವುಲ್ಲಾ ಅವರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಇತ್ತೀಚೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಆಗಿತ್ತು. ವಂಚಕನ ಪತ್ತೆಗಾಗಿ ಆರ್ಎಸ್ಐ ಮಂಜುನಾಥ್ ನೇತೃತ್ವದ ತಂಡವನ್ನು ಇನ್ಸ್ಪೆಕ್ಟರ್ ಉಮೇಶ್ ರಚಿಸಿದ್ದರು. ಈ ತಂಡದಲ್ಲಿ ಆರೋಪಿತ ಹೆಡ್ ಕಾನ್ಸ್ಟೆಬಲ್ ಸಹ ಇದ್ದರು ಎಂದು ಮೂಲಗಳು ಹೇಳಿವೆ. </p>.<p>ಸೈಬರ್ ಅಪರಾಧ ಪ್ರಕರಣವೊಂದರಲ್ಲಿ ಬಂಧಿಸಲಾಗಿದ್ದ ಆರೋಪಿಯನ್ನು ಕಮಿಷನರ್ ಕಚೇರಿ ಆವರಣದಲ್ಲಿರುವ ಸಿಸಿಬಿ ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆಂದು ತನಿಖಾಧಿಕಾರಿಗಳು ಕರೆತಂದಿದ್ದರು. ಜಪ್ತಿ ಮಾಡಿಕೊಂಡಿದ್ದ ಆರೋಪಿಯ ಕಾರನ್ನು ಸಹ ತಂದಿದ್ದರು. ಆ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿದ್ದರು. ಕಳ್ಳತನ ಮಾಡುತ್ತಿದ್ದ ದೃಶ್ಯ ಸೆರೆಯಾಗಿತ್ತು. ಅದನ್ನು ಆಧರಿಸಿ, ತನಿಖೆ ನಡೆಸಿದಾಗ ಜಬೀವುಲ್ಲಾ ಕೃತ್ಯ ಎಸಗಿರುವುದು ಸಾಬೀತಾಗಿತ್ತು ಎಂದು ತನಿಖಾ ಮೂಲಗಳು ಹೇಳಿವೆ.</p>.<p>‘ಕದ್ದ ಹಣದಿಂದ ಜಬೀವುಲ್ಲಾ ಅವರು ಪತ್ನಿಗೆ ಚಿನ್ನದ ಆಭರಣ ಮಾಡಿಸಿಕೊಟ್ಟಿದ್ದರು. ಉಳಿದ ಹಣವನ್ನು ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದರು’ ಎಂದು ಪೊಲೀಸರು ಹೇಳಿದರು.</p>.Bengaluru Crime: ಆರೋಪಿ ಕಾರಿನಲ್ಲಿದ್ದ ₹11 ಲಕ್ಷ ಕದ್ದ ಕಾನ್ಸ್ಟೆಬಲ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಿಲುಗಡೆ ಮಾಡಿದ್ದ ಕಾರಿನಲ್ಲಿದ್ದ ₹11 ಲಕ್ಷ ಹಣ ಕದ್ದು ನಾಟಕವಾಡಿದ್ದ ಹೆಡ್ ಕಾನ್ಸ್ಟೆಬಲ್ ಜಬೀವುಲ್ಲಾ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಕೇಂದ್ರ ವಿಭಾಗದ ಸೈಬರ್ ಠಾಣೆಯ ಇನ್ಸ್ಪೆಕ್ಟರ್ ಉಮೇಶ್ ಅವರು ನೀಡಿದ ದೂರಿನ ಮೇರೆಗೆ ಜಬೀವುಲ್ಲಾ ಅವರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಇತ್ತೀಚೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಆಗಿತ್ತು. ವಂಚಕನ ಪತ್ತೆಗಾಗಿ ಆರ್ಎಸ್ಐ ಮಂಜುನಾಥ್ ನೇತೃತ್ವದ ತಂಡವನ್ನು ಇನ್ಸ್ಪೆಕ್ಟರ್ ಉಮೇಶ್ ರಚಿಸಿದ್ದರು. ಈ ತಂಡದಲ್ಲಿ ಆರೋಪಿತ ಹೆಡ್ ಕಾನ್ಸ್ಟೆಬಲ್ ಸಹ ಇದ್ದರು ಎಂದು ಮೂಲಗಳು ಹೇಳಿವೆ. </p>.<p>ಸೈಬರ್ ಅಪರಾಧ ಪ್ರಕರಣವೊಂದರಲ್ಲಿ ಬಂಧಿಸಲಾಗಿದ್ದ ಆರೋಪಿಯನ್ನು ಕಮಿಷನರ್ ಕಚೇರಿ ಆವರಣದಲ್ಲಿರುವ ಸಿಸಿಬಿ ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆಂದು ತನಿಖಾಧಿಕಾರಿಗಳು ಕರೆತಂದಿದ್ದರು. ಜಪ್ತಿ ಮಾಡಿಕೊಂಡಿದ್ದ ಆರೋಪಿಯ ಕಾರನ್ನು ಸಹ ತಂದಿದ್ದರು. ಆ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿದ್ದರು. ಕಳ್ಳತನ ಮಾಡುತ್ತಿದ್ದ ದೃಶ್ಯ ಸೆರೆಯಾಗಿತ್ತು. ಅದನ್ನು ಆಧರಿಸಿ, ತನಿಖೆ ನಡೆಸಿದಾಗ ಜಬೀವುಲ್ಲಾ ಕೃತ್ಯ ಎಸಗಿರುವುದು ಸಾಬೀತಾಗಿತ್ತು ಎಂದು ತನಿಖಾ ಮೂಲಗಳು ಹೇಳಿವೆ.</p>.<p>‘ಕದ್ದ ಹಣದಿಂದ ಜಬೀವುಲ್ಲಾ ಅವರು ಪತ್ನಿಗೆ ಚಿನ್ನದ ಆಭರಣ ಮಾಡಿಸಿಕೊಟ್ಟಿದ್ದರು. ಉಳಿದ ಹಣವನ್ನು ಹಾಸಿಗೆ ಕೆಳಗೆ ಬಚ್ಚಿಟ್ಟಿದ್ದರು’ ಎಂದು ಪೊಲೀಸರು ಹೇಳಿದರು.</p>.Bengaluru Crime: ಆರೋಪಿ ಕಾರಿನಲ್ಲಿದ್ದ ₹11 ಲಕ್ಷ ಕದ್ದ ಕಾನ್ಸ್ಟೆಬಲ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>